
ನವದೆಹಲಿ(ಫೆ.14): ಆದಾಯ ಮೀರಿ ಆಸ್ತಿಗಳಿಕೆ ಮಾಡಿದ ಆರೋಪದಡಿ ಶಶಿಕಲಾನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ಅಪರಾಧಿಗಳೆಂದು ಘೋಷಿಸಿ ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ನೀಡಿದೆ.
ಈ ತೀರ್ಪಿನ ಪರಿಣಾಮಗಳೇನು ಎಂದು ನೋಡುವುದಾದರೆ;
ಶಶಿಕಲಾಗೆ ನಾಲ್ಕು ವರ್ಷ ಜೈಲು ಶಿಕ್ಷೆ, 10 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.
ತಡಮಾಡದೆ ಬೆಂಗಳೂರು ಕೋರ್ಟ್'ಗೆ ಶಶಿಕಲಾ ಶರಣಾಗಬೇಕಿದೆ.
ಚಿನ್ನಮ್ಮ ಇನ್ನು ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ಸದ್ಯಕ್ಕಂತೂ ಶಶಿಕಲಾ ಜೈಲಿಗೆ ಹೋಗದೆ ಬೇರೆ ದಾರಿಯಿಲ್ಲ. ಕೆಲವೇ ಕ್ಷಣಗಳಲ್ಲಿ ಚಿನ್ನಮ್ಮನ ಬಂಧನವಾಗಲಿದೆ.
ಸುಪ್ರೀಂ ತೀರ್ಪು ಪ್ರಶ್ನಿಸಿ ತ್ರಿಸದಸ್ಯ ಪೀಠಕ್ಕೆ ಮೇಲ್ಮನವಿ ಹೋಗಬಹುದು.
ಶಶಿಕಲಾ ಮೇಲ್ಮನವಿ ಅಂಗೀಕಾರವಾದರೆ, ಮತ್ತೆ ತೀರ್ಪು ವಿಚಾರಣೆ ಆರಂಭವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.