
ಚೆನ್ನೈ(ಫೆ.05): ತಮಿಳುನಾಡಿನ ನೂತನ ಸಿಎಂ ಆಗಿ ಶಶಿಕಲಾ ನಟರಾಜನ್ ಆಯ್ಕೆಯಾಗಿದ್ದಾರೆ. AIADMK ಪಕ್ಷದ ಕಚೇರಿಯಲ್ಲಿ ನಡೆದ ಶಶಿಕಲಾ ನಟರಾಜನ್ ಸಿಎಂ ಆಗಿ ಆಯ್ಕೆಯಾಗಿದ್ದಾರೆ. ನಾಳೆಯಿಂದ ತಮಿಳುನಾಡಿನಲ್ಲಿ ಚಿನ್ನಮ್ಮನ ಆಡಳಿತ ಆರಂಭವಾಗಲಿದೆ.
AIADMK ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ 'ಶಶಿಕಲಾ ನಟರಾಜನ್'ರನ್ನು ಸಿಎಂ ಆಗಿ ಆಯ್ಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದ್ದು, ಹಾಲಿ ಸಿಎಂ ಪನ್ನೀರ್ ಸೆಲ್ವಂ 'ಚಿನ್ನಮ್ಮ'ನ ಹೆಸರನ್ನು ಈ ಸ್ಥಾನಕ್ಕೆ ಪ್ರಸ್ತಾಪಿಸಿದ್ದಾರೆ. ಈವರೆಗೆ AIADMK ಪಕ್ಷ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಶಿಕಲಾ ಸಿಎಂ ಆಗಿ ಆಯ್ಕೆಯಾಗುವ ಮೂಲಕ ಜಯಲಲಿತಾ ಹಾದಿಯನ್ನೇ ತುಳಿದಂತಾಗಿದೆ. ಇನ್ನು ಹಾಲಿ ಸಿಎಂ ಈಗಾಗಲೇ ರಾಜ್ಯಪಾಲರ ಬಳಿ ತೆರಳಿದ್ದಾರೆ ಹಾಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿಲಿದ್ದಾರೆ.
ಫೆಬ್ರವರಿ 7 ರಂದು 'ಚಿನ್ನಮ್ಮ' ತಮಿಳುನಾಡಿನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.