ತಮಿಳುನಾಡು ಸಿಎಂ ಆಗಿ ಶಶಿಕಲಾ ನಟರಾಜನ್: ಸಿಎಂ ಪನ್ನೀರ್ ಸೆಲ್ವಂಗೆ ರಾಜೀನಾಮೆ ನೀಡಲು ಸೂಚನೆ

Published : Feb 04, 2017, 12:31 AM ISTUpdated : Apr 11, 2018, 01:10 PM IST
ತಮಿಳುನಾಡು ಸಿಎಂ ಆಗಿ ಶಶಿಕಲಾ ನಟರಾಜನ್: ಸಿಎಂ ಪನ್ನೀರ್ ಸೆಲ್ವಂಗೆ ರಾಜೀನಾಮೆ ನೀಡಲು ಸೂಚನೆ

ಸಾರಾಂಶ

ತಮಿಳುನಾಡಿನಲ್ಲಿ ಮತ್ತೊಮ್ಮೆ ರಾಜಕೀಯ ಬಿರುಗಾಳಿ ಎದ್ದಿದೆ. ದಿವಂಗತ ಜಯಲಲಿತಾ ಅವರ ಪರಮಾಪ್ತೆಯಾಗಿದ್ದ ಶಶಿಕಲಾ ನಟರಾಜನ್, ಮುಖ್ಯಮಂತ್ರಿಯಾಗುವ ಮುಹೂರ್ತ ಕೂಡಿ ಬಂದಿದೆ.

ಚೆನ್ನೈ(ಫೆ.04): ತಮಿಳುನಾಡಿನಲ್ಲಿ ಮತ್ತೊಮ್ಮೆ ರಾಜಕೀಯ ಬಿರುಗಾಳಿ ಎದ್ದಿದೆ. ದಿವಂಗತ ಜಯಲಲಿತಾ ಅವರ ಪರಮಾಪ್ತೆಯಾಗಿದ್ದ ಶಶಿಕಲಾ ನಟರಾಜನ್, ಮುಖ್ಯಮಂತ್ರಿಯಾಗುವ ಮುಹೂರ್ತ ಕೂಡಿ ಬಂದಿದೆ.

ಫೆಬ್ರವರಿ 8 ಅಥವಾ 9ರಂದು ಶಶಿಕಲಾ ಸಿಎಂ ಆಗುವ ಸಾಧ್ಯತೆಗಳಿವೆ. ಈಗಾಗಲೇ ಅಣ್ಣಾಡಿಎಂಕೆಯಿಂದ ಪನ್ನೀರ್​ಸೆಲ್ವಂಗೆ ರಾಜೀನಾಮೆ ನೀಡುವಂತೆ ಸೂಚನೆ ಹೋಗಿದೆ. ಅಷ್ಟೇ ಅಲ್ಲ, ಜಯಲಲಿತಾ ಆಪ್ತರಾಗಿದ್ದ ಶೀಲಾ ಬಾಲಕೃಷ್ಣನ್, ವೆಂಕಟರಾಮನ್ ಅವರಿಗೂ ರಾಜೀನಾಮೆ ನೀಡಲು ಸೂಚನೆ ಕೊಡಲಾಗಿದೆ. ಎಲ್ಲರೂ ರಾಜೀನಾಮೆ ನೀಡಿದ ನಂತರ, ಶಶಿಕಲಾ, ಸಿಎಂ ಆಗುವ ಸಾಧ್ಯತೆಗಳಿವೆ.

ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿರುವ ಶಶಿಕಲಾ ನಟರಾಜನ್, ಮುಂದಿನ ಬುಧವಾರ ಅಥವಾ ಗುರುವಾರ ಸಿಎಂ ಆಗಬಹುದು. ಪ್ರಮಾಣ ವಚನವನ್ನೂ ಸ್ವೀಕರಿಸಬಹುದು. ತಮಿಳುನಾಡಿನ ಹಲವು ಪತ್ರಿಕೆಗಳು ಈ ಬಗ್ಗೆ ವರದಿ ಮಾಡಿವೆ. ಅಣ್ಣಾಡಿಎಂಕೆಯಾಗಲೀ, ಸಿಎಂ ಅಥವಾ ಸರ್ಕಾರದ ಯಾರೊಬ್ಬರೂ ಇದನ್ನು ಅಲ್ಲಗಳೆದಿಲ್ಲ. ಪ್ರತಿಕ್ರಿಯೆಯನ್ನೂ ನೀಡಿಲ್ಲ. ಹೀಗಾಗಿ ಈ ಸುದ್ದಿ, ನಿಜವಾಗಬಹುದು ಎಂಬ ನಿರೀಕ್ಷೆ ಎಲ್ಲ ಕಡೆ ಇದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಿ ರಾಮ್‌ ಜಿ ರದ್ದತಿಗಾಗಿ ಹೋರಾಟ : ಸೋನಿಯಾ
ಡಿಕೆ ಸಿಎಂ ಆಗಿ ಕಸ ಹೊಡೆಯಲು ಹೇಳಿದ್ರೂ ಮಾಡುವೆ: ಶಾಸಕ ಬಸವರಾಜ ವಿ.ಶಿವಗಂಗಾ