
ಚೆನ್ನೈ(ಡಿ.15): ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ನಿಧನದ ನಂತರ ತೆರವಾಗಿದ್ದ ಅಣ್ಣಾಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ನಿರೀಕ್ಷೆಯಂತೆ ಜಯಾ ಪರಮಾಪ್ತ ಗೆಳತಿ ಶಶಿಕಲಾ ನಟರಾಜನ್ ಅವರನ್ನು ಆಯ್ಕೆ ಮಾಡಲಾಗಿದೆ. ಶಶಿಕಲಾ ಅವರು ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಸಾರಥ್ಯ ವಹಿಸಲಿದ್ದಾರೆ ಎಂದು ಪಕ್ಷದ ವಕ್ತಾರ ಸಿ.ಪೊನ್ನೈಯನ್ ತಿಳಿಸಿದ್ದಾರೆ.
ಜಯಲಲಿತಾ ಅವರ ನಿಕಟವರ್ತಿ ಶಶಿಕಲಾ ಅವರು ಎಐಎಡಿಎಂಕೆ ಪಕ್ಷದ ಮುಂದಿನ ಪ್ರಧಾನ ಕಾರ್ಯದರ್ಶಿ ಹುದ್ದೆ ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಶಶಿಕಲಾ ಅವರ ಆಯ್ಕೆ ಬಗ್ಗೆ ಪಕ್ಷದೊಳಗೆ ಯಾವುದೇ ಅಪಸ್ವರ ಇಲ್ಲ ಎಂಬುದಾಗಿ ಹೇಳಿದ್ದಾರೆ. ಜಯಾ ಅನುಪಸ್ಥಿತಿಯಲ್ಲಿ ಪಕ್ಷವನ್ನು ಮುನ್ನಡೆಸಬೇಕು ಎಂದು ಲೋಕಸಭೆ ಉಪಸಭಾಪತಿ ತಂಬಿದೊರೈ ನೇತೃತ್ವದ ನಿಯೋಗ ಮೊನ್ನೆ ಶಶಿಕಲಾರನ್ನು ಭೇಟಿ ಮಾಡಿತ್ತು. ಪುರುಚ್ಚಿ ತಲೈವಿ ಜಯಲಲಿತಾ ಅವ್ರ ಸ್ಥಾನ ಭರ್ತಿ ಮಾಡಲು, ಚಿನ್ನಮ್ಮ ಅಂದ್ರೆ ಶಶಿಕಲಾ ಅವರೇ ಸೂಕ್ತ ವ್ಯಕ್ತಿ. ಅವರು ನಮಗೆ ಮಾರ್ಗದರ್ಶನ ಮಾಡ ಬೇಕು. ಈ ಬಗ್ಗೆ ಅವರಿಗೆ ಕೋರಿಕೆ ಸಲ್ಲಿಸಿದ್ದೇವೆ ಎಂದು ತಂಬಿದೊರೈ ತಿಳಿಸಿದ್ದಾರೆ..
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.