ಶಶಿಕಲಾ ಮುಖ್ಯಮಂತ್ರಿಯಾಗಲಿ: ಏಐಏಡಿಎಂಕೆ ಹಿರಿಯ ನಾಯಕ ತಂಬಿದೊರೈ

Published : Jan 02, 2017, 09:21 AM ISTUpdated : Apr 11, 2018, 12:50 PM IST
ಶಶಿಕಲಾ ಮುಖ್ಯಮಂತ್ರಿಯಾಗಲಿ: ಏಐಏಡಿಎಂಕೆ ಹಿರಿಯ ನಾಯಕ ತಂಬಿದೊರೈ

ಸಾರಾಂಶ

ಮುಖ್ಯಮಂತ್ರಿ ಜಯಾಲಲಿತಾ ಅವರು ನಿಧನಹೊಂದಿದ ಬಳಿಕ ಓ.ಪನ್ನೀರುಸೆಲ್ವಂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರೆ, ಜಯಾ ಆಪ್ತೆ ಶಶಿಕಲಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಎರಡು ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದಾರೆ.

ಚೆನ್ನೈ (ಜ. 02): ತಮಿಳುನಾಡಿನ ಮುಖ್ಯಮಂತ್ರಿಯಾಗಿ ಏಐಏಡಿಎಂಕೆ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿರುವ ವಿ.ಕೆ.ಶಶಿಕಲಾ ಅಧಿಕಾರ ವಹಿಸಬೇಕೆಂದು ಪಕ್ಷದ ಹಿರಿಯ ನಾಯಕ ಹಾಗೂ ಲೋಕಸಭೆಯ ಉಪ-ಸಭಾಪತಿ ಎಂ.ತಂಬಿದೊರೈ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಜಯಾಲಲಿತಾ ಅವರು ನಿಧನಹೊಂದಿದ ಬಳಿಕ ಓ.ಪನ್ನೀರುಸೆಲ್ವಂ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರೆ, ಜಯಾ ಆಪ್ತೆ ಶಶಿಕಲಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಎರಡು ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದಾರೆ.

ಜಯಾಲಲಿತಾರಂತೆ ಶಶಿಕಲಾ ಅವರಿಗೆ ರಾಜ್ಯವನ್ನು ಮುನ್ನಡೆಸುವ ಸಾಮರ್ಥ್ಯ, ಬುದ್ದಿವಂತಿಕೆ ಹಾಗೂ ಜನರ ಬೆಂಬಲವಿದೆ. ಹಾಗಾಗಿ ಅವರು ಮುಖ್ಯಮತ್ರಿಯಾಗಿ ಅಧಿಕಾರ ಸ್ವೀಕರಿಸಬೇಕು ಎಂದು ತಂಬಿದೊರೈ ಹೇಳಿದ್ದಾರೆ.

ಅಮ್ಮಾ ನಿಧನದ ಬಳಿಕ ಪಕ್ಷದ ಭವಿಷ್ಯದ ಬಗ್ಗೆ ಕಾರ್ಯಕರ್ತರೆಲ್ಲರು ಚಿಂತಾಕ್ರಾಂತರಾಗಿದ್ದೆವು. ಚಿನ್ನಮ್ಮ ದೀಪಸ್ತಂಭದಂತೆ ಬಂದು ಪಕ್ಷವನ್ನು ಕಾಪಾಡಿದ್ದಾರೆ ಎಂದು ತಂಬಿದೊರೈ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!