
ಬೆಂಗಳೂರು (ಫೆ.15): ಆಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರಿಗೆ ಪರಪ್ಪನ ಅಗ್ರಹಾರಾದಲ್ಲಿರುವ ಕೇಂದ್ರ ಕಾರಗೃಹದ ಮಹಿಳಾ ಕೈದಿಗಳ ಬ್ಯಾರೆಕ್’ನಲ್ಲಿ ಬಂಧನದಲ್ಲಿಡಲು ಕಾರಾಗೃಹದ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಈ ಸೆಲ್’ನಲ್ಲಿ ಶಶಿಕಲಾ ಅವರ ಭದ್ರತೆಗೆ 10 ಮಂದಿ ಮಹಿಳಾ ಸಿಬ್ಬಂದಿಯನ್ನು ನಿಯೋಜನೆಗೆ ನಿರ್ಧರಿಸಿದ್ದು, 24 ತಾಸು ಶಸ್ತ್ರಸಜ್ಜಿತವಾಗಿ ಕಾರ್ಯನಿರ್ವಸಹಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಆಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ 2014ರಲ್ಲಿ ಶಿಕ್ಷೆಗೆಗೊಳಗಾಗಿದ್ದ ಸಂದರ್ಭದಲ್ಲಿ ನೀಡಲಾಗಿದ್ದ ಸೆಲ್’ನ್ನೇ ಈಗಲೂ ಗೊತ್ತುಪಡಿಸಲಾಗಿದೆ. ಆಗ ಅನಾರೋಗ್ಯ ಕಾರಣಕ್ಕೆ ಜಯಲಲಿತಾ ಅವರು ಮಹಿಳಾ ಬ್ಯಾರೆಕ’ನಲ್ಲಿರುವ ಆಸ್ಪತ್ರೆ ಕಟ್ಟಡದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.