
ನವದೆಹಲಿ (ಅ.06): ಕರುಳು ಮತ್ತು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಪತಿ ನಟರಾಜನ್’ರವರನ್ನು ಭೇಟಿ ಮಾಡಲು ಎಐಎಡಿಎಂಕೆ ನಾಯಲಿ ಶಶಿಕಲಾ ಇಂದಿನಿಂದ 5 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆಯಾಗಿದ್ದಾರೆ.
ಶಶಿಕಲಾರವರು 15 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆದರೆ ಸೂಕ್ತ ದಾಖಲೆಗಳನ್ನು ಸಲ್ಲಿಸದ ಕಾರಣ ಅವರ ಪೆರೋಲ್ ಅರ್ಜಿಯನ್ನು ಅಧಿಕಾರಿಗಳು ನಿರಾಕರಿಸಿದ್ದರು. ನಂತರ ಶಶಿಕಲಾ ಮತ್ತೊಂದು ಅರ್ಜಿ ಸಲ್ಲಿಸಿದ್ದು 5 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲು ಅಧಿಕಾರಿಗಳು ಒಪ್ಪಿದ್ದಾರೆ.
ಶಶಿಕಲಾ ಪತಿ ನಟರಾಜನ್ ಚೆನ್ನೈ ಆಸ್ಪತ್ರೆಯಲ್ಲಿ ಕರುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರನ್ನು ಭೇಟಿ ಮಾಡಲು ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಿಂದ ಚೆನ್ನೈಗೆ ಧಾವಿಸಲಿದ್ದಾರೆ. ಶಶಿಕಲಾರವರು ಆಸ್ಪತ್ರೆಗೆ ಮಾತ್ರ ಭೇಟಿ ನೀಡಬೇಕು. ಅಲ್ಲಿ ಯಾರನ್ನೂ ಭೇಟಿ ಮಾಡುವಂತಿಲ್ಲ. ತಾವು ತಂಗಿರುವ ಸ್ಥಳದಲ್ಲಿಯೂ ಯಾರನ್ನೂ ಭೇಟಿ ಮಾಡುವಂತಿಲ್ಲ. ಯಾವುದೇ ರಾಜಕೀಯ ಚಟುವಟಿಕೆಯನ್ನು ನಡೆಸುವಂತಿಲ್ಲವೆಂದು ನಿರ್ಬಂಧ ಹೇರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.