
ಬೆಂಗಳೂರು(ಆ.21): ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾಗೆ ಸಕಲ ಸೌಕರ್ಯ ನೀಡುತ್ತಿರುವ ಆರೋಪದಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ಇದರ ಬೆನ್ನಲ್ಲೇ ಇದೀಗ ಬಿಡುಗಡೆಯಾದ ಸಿಸಿಟಿವಿ ದೃಶ್ಯಾವಳಿಗಳು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಹೋಗಿದ್ದರಾ ಎಂಬ ಅನುಮಾನ ಉದ್ಭವಿಸುವಂತೆ ಮಾಡಿವೆ.
ಶಶಿಕಲಾ ಜೈಲಿನ ಹೊರಗಿನಿಂದ ಒಳಬರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದರಿಂದಾಗಿ ಶಶಿಕಲಾ ಜೈಲಿನಿಂದ ಹೊರಹೋಗುತ್ತಿದ್ದರಾ ಎಂಬ ಪ್ರಶ್ನೆ ಇದರಿಂದ ಉದ್ಭವಿಸಿದೆ. ಡಿಜಿಪಿ ಆರ್. ಕೆ ದತ್ತಾಗೆ, ಡಿಐಜಿ ರೂಪಾ ಈ ಸಿಸಿಟಿವಿ ದೃಶ್ಯಾವಳಿಗಳನ್ನು ಹಸ್ತಾಂತರಿಸಿದ್ದಾರೆ.
ಈ ದೃಶ್ಯಾವಳಿಗಳಲ್ಲಿ ಮೊದಲು ಅಧೀಕ್ಷಕಿ ಅನಿತಾ ಜೈಲಿನ ಒಳಗೆ ಬರುತ್ತಿದ್ದು, ಅವರ ಹಿಂದೆ ಶಶಕಲಾ ಆಗಮಿಸಿದ್ದಾರೆ. ಜೈಲಿನ ಕೈದಿಗಳಿಗಿಂತ ಇವರಿಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.