
ಬೆಳಗಾವಿ, [ಅ.14]: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಸ್ಪರ್ಧಿಸುವುದು ಖಚಿತ ಎಂದು ಅವರ ಸಹೋದರ, ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಒಂದೊಮ್ಮೆ ಸತೀಶ್ ಚಿಕ್ಕೋಡಿಯಿಂದ ಸ್ಪರ್ಧಿಸಿದರೆ, ಬೆಳಗಾವಿಯಿಂದ ಪ್ರಕಾಶ್ ಹುಕ್ಕೇರಿ ಕಣಕ್ಕಿಳಿಯಲಿದ್ದಾರೆ. ಈ ಸಂಬಂಧ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದು ಹೇಳಿದರು.
ಪಕ್ಷದ ಹೈಕಮಾಂಡ್ ಉಪ ಚುನಾವಣೆ ಟಿಕೆಟ್ ಹಂಚಿಕೆ ತೀರ್ಮಾನ ಕೈಗೊಳ್ಳಲಿದ್ದು, ಪಕ್ಷದ ನಾಯಕರು ಹೇಳಿದರೆ ನಾನು ಪ್ರಚಾರ ಮಾಡುತ್ತೇನೆ. ಉಪ ಚುನಾವಣೆಯಲ್ಲಿ ಕೆಲವು ಕಡೆ ಫೈಟ್ ಇದೆ.
ಬಹುತೇಕ ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ನನಗೆ ಜಮಖಂಡಿ ಕೊಡಲಿ ಇಲ್ಲವೇ ಬಳ್ಳಾರಿ ಮತ್ತು ಶಿವಮೊಗ್ಗ ಕೊಡಲಿ ಅಲ್ಲಿ ನಾನು ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.