ನಟ ನಿನಾಸಂ ಸತೀಶ್ ಮತ್ತೊಂದು ಹೊಸ ಹೆಜ್ಜೆ

Published : Jun 17, 2018, 11:25 AM IST
ನಟ ನಿನಾಸಂ ಸತೀಶ್ ಮತ್ತೊಂದು ಹೊಸ ಹೆಜ್ಜೆ

ಸಾರಾಂಶ

ಹಳ್ಳಿಯ ಸಮಸ್ಯೆ ಬಗೆಹರಿಸಿ ಮಾದರಿ ಗ್ರಾಮವನ್ನಾಗಿ ಮಾಡಲು ಚಿಂತಿಸಿರುವ ನಟ ನಿನಾಸಂ ಸತೀಶ್ ಮಂಡ್ಯ ಜಿಲ್ಲೆ,ಮಳವಳ್ಳಿ ತಾಲೂಕಿನ ಹುಲ್ಲೆಗಾಲ ಎಂಬ ಹಳ್ಳಿಯನ್ನು ದತ್ತು ಪಡೆದಿದ್ದಾರೆ.  

ಮಂಡ್ಯ : ಹಳ್ಳಿಯ ಸಮಸ್ಯೆ ಬಗೆಹರಿಸಿ ಮಾದರಿ ಗ್ರಾಮವನ್ನಾಗಿ ಮಾಡಲು ಚಿಂತಿಸಿರುವ ನಟ ನಿನಾಸಂ ಸತೀಶ್ ಮಂಡ್ಯ ಜಿಲ್ಲೆ,ಮಳವಳ್ಳಿ ತಾಲೂಕಿನ ಹುಲ್ಲೆಗಾಲ ಎಂಬ ಹಳ್ಳಿಯನ್ನು ದತ್ತು ಪಡೆದಿದ್ದಾರೆ.  .

150 ಜನರ ಟೀಮ್ ಹೊಂದಿರುವ ಸತೀಶ್ ಪಿಕ್ಚರ್ ಹೌಸ್ ಅಡಿಯಲ್ಲಿ ಗ್ರಾಮ ದತ್ತು ಪಡೆದಿದ್ದು, ಈ ಬಗ್ಗೆ ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.  ಒಟ್ಟಾರೆ 400ಮನೆಗಳನ್ನ ಈ ಹಳ್ಳಿ ಹೊಂದಿದ್ದು, ಈ ಗ್ರಾಮದಲ್ಲಿ ಸಮಸ್ಯೆಗಳನ್ನು ಸಂಪೂರ್ಣವಾಗಿ ಪರಿಹರಿಸುವ ಭರವಸೆ ನೀಡಿದ್ದಾರೆ. 

ಗ್ರಾಮದ ಪ್ರಾಥಮಿಕ ಸಮಸ್ಯೆಗಳಾದ ನೀರಿನ ಸಮಸ್ಯೆ ಬಗೆಹರಿಸುವುದು,  ಶಿಕ್ಷಣ ವ್ಯವಸ್ಥೆಯನ್ನು ಉತ್ತಮಗೊಳಿಸುವುದಕ್ಕೆ ಸತೀಶ್ ನಿರ್ಧಾರ ಮಾಡಿದ್ದಾರೆ.  ನಟ ಸತೀಶ್ ನೀನಾಸಂ ಸತೀಶ್ ಅವರ ಈ ಸಾಮಾಜಿಕ ಕಳಕಳಿಗೆ ಗ್ರಾಮಸ್ಥರೆಲ್ಲಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು
Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!