
ಬೆಳಗಾವಿ : ಲೋಕಸಭಾ ಚುನಾವಣೆ ರಾಜ್ಯದಲ್ಲಿ ಮುಕ್ತಾಯವಾಗಿದ್ದು, ಸದ್ಯ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿವೆ. ಇದೇ ವೇಳೆ ಅತ್ತ ಬಿಜೆಪಿಗರು ಕಾಂಗ್ರೆಸಿನವರ ತಮ್ಮ ಸಂಪರ್ಕದಲ್ಲಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ ಇತ್ತ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಸುಳಿವು ನೀಡಿದ್ದಾರೆ.
"
ಆಪರೇಷನ್ ಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹಸ್ತದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅತೃಪ್ತ ನಾಯಕ ರಮೇಶ್ ಜಾರಕಿಹೊಳಿ ಜೊತೆಗೆ ಹಲವು ಶಾಸಕರಿದ್ದಾರೆ, ಅವರೆಲ್ಲಾ ಪಕ್ಷ ತೊರೆಯುತ್ತಾರೆ ಎನ್ನುವುದು ಸುಳ್ಳು. ಅದರಿಂದ ಸಮ್ಮಿಶ್ರ ಸರ್ಕಾರ ಯಾವುದೇ ತೊಂದರೆ ಇಲ್ಲ ಎಂದು ಸತೀಶ್ ಹೇಳಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಅವರು ಆಪರೇಷನ್ ಮಾಡಿದರೆ ಪ್ರತಿಯಾಗಿ ಆಪರೇಷನ್ ಮಾಡಲು ಜೆಡಿಎಸ್-ಕಾಂಗ್ರೆಸ್ ಗೂ ಶಕ್ತಿ ಇದೆ. ಸಮಯ ಬಂದಾಗ ನಮ್ಮ ಸಂಖ್ಯಾ ಬಲವನ್ನೂ ಕೂಡ ನಾವು ತೋರಿಸುತ್ತೇವೆ. ಸರ್ಕಾರ ಬೀಳುವ ಸ್ಥಿತಿಗೆ ಬಂದರೆ ಉಳಿಸಿಕೊಳ್ಳಲು ಆಪರೇಷನ್ ಮಾಡಲು ನಾವು ಸಿದ್ಧ ಎಂದಿದ್ದಾರೆ.
ಇನ್ನು ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾವುದೇ ಸಮಕ್ಷೆಯೂ ಕೂಡ ಬಿಜೆಪಿಗೆ ಹೆಚ್ಚಿನ ಮೆಜಾರಿಟಿ ಬರುತ್ತದೆ ಎಂದು ಹೇಳಿಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.