
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಯಿಂದ ರಾಜ್ಯದ ಸಮಗ್ರತೆಗೆ ಹಾನಿ ಉಂಟಾಗುವಂತಿದ್ದರೆ ಕುಮಾರ ಸ್ವಾಮಿ ಅವರು ಹೇಳಿಕೆಯನ್ನು ವಾಪಸು ಪಡೆಯಲೇಬೇಕು. ಈ ಬಗ್ಗೆ ಅವರೊಂದಿಗೆ ಚರ್ಚೆ ನಡೆಸುತ್ತೇವೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಕೇವಲ ರಾಮನಗರ, ಚನ್ನಪಟ್ಟಣ ಮುಖ್ಯಮಂತ್ರಿ ಅಲ್ಲ. ಅವರು ಜನರನ್ನು ಪ್ರತ್ಯೇಕಿಸಿ ಹೇಳಿಕೆ ನೀಡಿರುವುದಿಲ್ಲ. ಒಂದು ವೇಳೆ ಅವರ ಹೇಳಿಕೆಯಿಂದ ಹಾನಿ ಉಂಟಾಗುವುದಾದರೆ ವಾಪಸ್ಸು ಪಡೆಯ ಬೇಕು. ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು. ಕುಮಾರಸ್ವಾಮಿ ಹೇಳಿಕೆಯಿಂದ ಲೋಕಸಭೆ ಚುನಾವಣೆಗೆ ಪರಿಣಾಮ ಬೀರಲ್ಲ.
ಒಂದು ವೇಳೆ ಆದರೆ, ಡ್ಯಾಮೇಜ್ ಕಂಟ್ರೋಲ್ ಮಾಡಲು ಪರ್ಯಾಯವಾಗಿ ಏನು ಮಾಡಬಹುದು ಎಂಬುದನ್ನು ನೋಡುತ್ತೇವೆ. ಜೆಪಿಯವರೂ ಇದನ್ನು ಅಸ್ತ್ರ ವಾಗಿ ಬಳಸುವುದಿಲ್ಲ. ಒಂದು ವೇಳೆ ಬಳಸಿದರೆ ಅವರಿಗೆ ಮಾರಕವಾಗಲಿದೆ ಎಂದು ಇದೇ ವೇಳೆ ಅಭಿಪ್ರಾಯಪಟ್ಟರು. ಉತ್ತರ ಕರ್ನಾಟಕ ಜನತೆಗೆ ಸಮ್ಮಿಶ್ರ ಸರ್ಕಾರದಲ್ಲಿ ಅನ್ಯಾಯವಾಗಿದೆ ಎಂಬ ಮಾತಿದೆ. ಈ ಸರ್ಕಾರದಲ್ಲಿ ಮಂಡನೆಯಾಗಿರುವುದು ಎರಡು ಬಜೆಟ್. ನಾನು ಕುಮಾರಸ್ವಾಮಿ ಅವರ ಬಜೆಟ್ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಸಾಕಷ್ಟು ಕೊಡುಗೆ ಹಾಗೂ ಅನುದಾನ ನೀಡಿದ್ದಾರೆ ಎಂದು ಹೇಳಿದರು. ಈ ಮೂಲಕ ಕುಮಾರಸ್ವಾಮಿ ಬಜೆಟ್ ಬಗ್ಗೆ
ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.