ಜಾರಕಿಹೊಳಿಗೆ ಸಿಎಂ ಪಟ್ಟ ನೀಡಿದ ಮಾಜಿ ಸಿಎಂ..ಹೊಸ ಲೆಕ್ಕಾಚಾರ ಶುರು!

Published : Dec 19, 2018, 10:41 PM ISTUpdated : Dec 19, 2018, 10:45 PM IST
ಜಾರಕಿಹೊಳಿಗೆ ಸಿಎಂ ಪಟ್ಟ ನೀಡಿದ ಮಾಜಿ ಸಿಎಂ..ಹೊಸ ಲೆಕ್ಕಾಚಾರ ಶುರು!

ಸಾರಾಂಶ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸತೀಶ್‌ ಜಾರಕಿಹೊಳಿ ಸಿಎಂ ಆಗಬಹುದು ಎಂಬ ಹೇಳಿಕೆ ರಾಜಕಾರಣದ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.

ಬಾಗಲಕೋಟೆ[ಡಿ.19]  ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ ಎಲ್ಲ ಸಮಾಜದವರಿಗೂ ಅವಕಾಶ ಬಂದೇ ಬರುತ್ತದೆ. ಮುಂದಿನ ದಿನಗಳಲ್ಲಿ ಯಾವ ಬದಲಾವಣೆ ಆಗುತ್ತದೆ ಕಾದು ನೋಡೋಣ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕಕ್ಕೆ ಸಚಿವ ಸ್ಥಾನ ಪಡೆದೇ ಅಭಿವೃದ್ಧಿ ಮಾಡಬೇಕೇನಿಲ್ಲ. ಸಚಿವರಾಗಿಯೇ ನ್ಯಾಯ ಕೊಡಸಬೇಕಿಲ್ಲ. ಸಚಿವ ಸ್ಥಾನ ಇರದಿದ್ದರೂ ಅಭಿವೃದ್ಧಿ ಮಾಡುವ ಶಕ್ತಿಯಿದೆ ಎಂದು ಪರೋಕ್ಷವಾಗಿ  ಸರ್ಕಾರಕ್ಕೆ ಟಾಂಗ್ ನೀಡಿದರು.

ಸಚಿವ ರಮೇಶ್ ಜಾರಕಿಹೊಳಿ ಅಧಿವೇಶನ ಮತ್ತು ಸಂಪುಟ ಸಭೆಗೆ ಗೈರಾಗುತ್ತಯಿರುವುದು ಅವರ ವೈಯಕ್ತಿಕ ವಿಚಾರ. ನಾನು ಅದರ ಬಗ್ಗೆ ಏನು ಹೇಳಲು ಸಾಧ್ಯ? ಸರ್ಕಾರ ಸುಭದ್ರವಾಗಿದೆ. ಸಚಿವ ಸ್ಥಾನ ನೀಡುವ ವಿಚಾರ ಹಿರಿಯ ನಾಯಕರಿಗೆ ಬಿಟ್ಟಿದ್ದು ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು