(ವಿಡಿಯೋ)'ನಾನ್ಯಾವತ್ತೂ ಕನ್ನಡಿಗರ ವಿರುದ್ಧ ಮಾತನಾಡುವುದಿಲ್ಲ' ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಕಟ್ಟಪ್ಪ!

Published : Apr 20, 2017, 08:54 AM ISTUpdated : Apr 11, 2018, 12:56 PM IST
(ವಿಡಿಯೋ)'ನಾನ್ಯಾವತ್ತೂ ಕನ್ನಡಿಗರ ವಿರುದ್ಧ ಮಾತನಾಡುವುದಿಲ್ಲ' ಕೊನೆಗೂ ಕನ್ನಡಿಗರ ಕ್ಷಮೆ ಕೇಳಿದ ಕಟ್ಟಪ್ಪ!

ಸಾರಾಂಶ

ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಕನ್ನಡಿಗರ ಸಿಟ್ಟಿಗೆ ಕಾರಣವಾಗಿದ್ದ ನಟ ಸತ್ಯರಾಜ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತಾಗಿ ಸುವರ್ಣ ನ್ಯೂಸ್ ಕಳೆದ ಮಾರ್ಸ್ 24ರಿಂದ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಹೀಗಾಗಿ ಕಟ್ಟಪ್ಪ ಕನ್ನಡಿಗರ ಕ್ಮೆ ಯಾಚಿಸಿದ್ದು ಸುವರ್ಣ ನ್ಯೂಸ್ ವರದಿಗೆ ಸಿಕ್ಕ ಫಲಶೃತಿ ಎನ್ನಬಹುದು.  

ಬೆಂಗಳೂರು(ಎ.21): ಕನ್ನಡಿಗರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಕನ್ನಡಿಗರ ಸಿಟ್ಟಿಗೆ ಕಾರಣವಾಗಿದ್ದ ನಟ ಸತ್ಯರಾಜ್ ಕೊನೆಗೂ ಕನ್ನಡಿಗರ ಬಳಿ ಕ್ಷಮೆ ಯಾಚಿಸಿದ್ದಾರೆ. ಈ ಕುರಿತಾಗಿ ಸುವರ್ಣ ನ್ಯೂಸ್ ಕಳೆದ ಮಾರ್ಸ್ 24ರಿಂದ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಹೀಗಾಗಿ ಕಟ್ಟಪ್ಪ ಕನ್ನಡಿಗರ ಕ್ಮೆ ಯಾಚಿಸಿದ್ದು ಸುವರ್ಣ ನ್ಯೂಸ್ ವರದಿಗೆ ಸಿಕ್ಕ ಫಲಶೃತಿ ಎನ್ನಬಹುದು.  

ಇನ್ನು ಕ್ಷಮೆ ಯಾಚಿಸಿರುವ ಸತ್ಯರಾಜ್ 'ನಾನು ಕನ್ನಡಿಗರ ವಿರೋಧಿಯಲ್ಲ. ಕಾವೇರಿ ವಿಚಾರದಲ್ಲಿ ನಾನು ಈ ಹೇಳಿಕೆ ನೀಡಿದ್ದೆ ಆದರೆ ಇನ್ನು ಯಾವತ್ತಿಗೂ ನಾನು ಕನ್ನಡಿಗರ ವಿರುದ್ಧ ಮಾತನಾಡುವುದಿಲ್ಲ. ನನ್ನ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ದಯವಿಟ್ಟು ನನ್ನನ್ನು ಕ್ಷಮಿಸಿ. ಕರ್ನಾಟಕದಲ್ಲಿ ಬಾಹುಬಲಿ ಬಿಡುಗಡೆಗೆ ಅವಕಾಶ ಮಾಡಿಕೊಡಿ' ಎಂದಿದ್ದಾರೆ.

ನಿನ್ನೆಯಷ್ಟೇ ಬಾಹುಬಲಿ ಸಿನಿಮಾ ನಿರ್ದೇಶಕ ರಾಜಮೌಳಿ ಸತ್ಯರಾಜ್ ಮಾತುಗಳನ್ನು ಕೇಳಿ ಬಾಹುಬಲಿ ರಿಲೀಸ್'ಗೆ ವಿರೋಧ ವ್ಯಕ್ತಪಡಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು ಹಾಗೂ ಕನ್ನಡಿಗರನ್ನು ಓಲೈಸುವ ಯತ್ನ ಮಾಡಿದ್ದರು. ಆದರೆ ಕನ್ನಡಿಗರು ಮಾತ್ರ ಇವರ ಈ ಮನವಿಗೆ ಸ್ಪಂದಿಸದೆ ಖುದ್ದು ಸತ್ಯರಾಜ್ ಕನ್ನಡಿಗರ ಕ್ಷಮೆ ಕೇಳಬೇಕು ಎಂದಿದ್ದರು. ಇದೀಗ ಕನ್ನಡಿಗರ ಪ್ರತಿಭಟನೆಗೆ ಜಯ ಲಭಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯಪುರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 5 ಎಕರೆ ಕಬ್ಬು, ಟ್ರೈಲರ್ ಬೆಂಕಿಗಾಹುತಿ! ರೈತ ಕಣ್ಣೀರು
ಜನವರಿ 1, 2026 ರಿಂದ 10 ನಿಯಮಗಳಲ್ಲಿ ಬದಲಾವಣೆ, ಸಂಬಳ-ಪಡಿತರ ಮೇಲೆ ನೇರ ಪರಿಣಾಮ