
ನವದೆಹಲಿ(ಫೆ.20): ಭಾರತ ಪ್ರವಾಸದಲ್ಲಿರುವ ಸೌದಿ ರಾಜಕುಮಾರ ಮಹಮ್ಮದ್ ಬಿನ್ ಸಲ್ಮಾನ್ ಅವರನ್ನು ಪ್ರಧಾನಿ ಮೋದಿ ಹಾಗೂ ವಿದೇಶಾಂಗ ಸಚಿವೆ ಸ್ವರಾಜ್ ಅವರು ಸ್ವಾಗತಿಸಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ದೇಶಗಳ ನಾಯಕರು ಒಪ್ಪಂದಗಳ ವಿನಿಮಯ ಹಾಗೂ ಜಂಟಿ ಪತ್ರಿಕಾ ಹೇಳಿಕೆ ನೀಡಿದರು. ವ್ಯಾಪಾರ, ಹೂಡಿಕೆ ರಕ್ಷಣೆ ಹಾಗೂ ಪ್ರಾದೇಶಿಕ ಸಹಕಾರದ ಕುರಿತು ಪರಸ್ಪರ ಮಾತುಕತೆ ನಡೆದಿದೆ.
ಇದೇ ವೇಳೆ ಭಯೋತ್ಪಾದನೆ ಕುರಿತು ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಮ್ಮದ್ ಬಿನ್ ಸಲ್ಮಾನ್, ಈ ಜಾಗತಿಕ ಪಿಡುಗಿನ ವಿರುದ್ಧ ಉಭಯ ದೇಶಗಳೂ ಒಟ್ಟಾಗಿ ಹೋರಾಡಲಿವೆ ಎಂದು ಹೇಳಿದ್ದಾರೆ.
ಭಾರತ ಹಾಗೂ ಸೌದಿ ಅರೆಬಿಯಾ ನಡುವಣ ಗಟ್ಟಿ ಬಾಂಧವ್ಯ ನಮ್ಮ ಡಿಎನ್ಎ ನಲ್ಲಿಯೇ ಅಡಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆಯನ್ನು ಸೌದಿ ದೊರೆ ಅನುಮೋದಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಸೌದಿ ರಾಜಕುಮಾರ, ಎರಡು ದೇಶಗಳ ನಡುವೆ ಪುರಾತನ ಕಾಲದಿಂದಲೂ ಬಾಂಧವ್ಯವಿದೆ. ಉಭಯ ದೇಶಗಳ ಹಿತದೃಷ್ಟಿಯಿಂದ ಈ ಬಾಂಧವ್ಯವನ್ನು ಕಾಪಾಡಿಕೊಂಡು ಅದನ್ನು ಮತ್ತಷ್ಟು ಬಲಗೊಳಿಸಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.