
ತಿರುವನಂತರಪುರ (ಡಿ. 27): ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಉಳಿಸಿಕೊಂಡು ಹೋಗಬೇಕೆಂಬ ಆಶಯದೊಂದಿಗೆ ಕೇರಳದಲ್ಲಿ ಭುಧವಾರ ಬೃಹತ್ ಅಯ್ಯಪ್ಪ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾಸರಗೋಡಿನ ಹೊಸಂಗಡಿಯಿಂದ ಹಿಡಿದು ಕನ್ಯಾಕುಮಾರಿಯವರೆಗೆ ಸುಮಾರು 795 ಕಿ.ಮೀ ಉದ್ದದ ಜಾಗದಲ್ಲಿ ಜನ ಸಂಜೆ 6ರಿಂದ 6.30ರವರೆಗೆ ಜ್ಯೋತಿ ಬೆಳಗುವ ಮೂಲಕ ಅಯ್ಯಪ್ಪನ ಮಂತ್ರ ಜಪಿಸಿದರು. ಶಬರಿಮಲೆ ಕರ್ಮ ಸಮಿತಿ ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿತ್ತು. 2019ರ ಜ.1ರಂದು ಕೇರಳ ಸರ್ಕಾರ ರಾಜ್ಯದುದ್ದಕ್ಕೂ ಮಹಿಳಾ ಗೋಡೆ ಕಾರ್ಯಕ್ರಮ ಆಯೋಜಿಸಿದೆ.
ಶಬರಿಮಲೆ ವಿವಾದದಿಂದ ತನ್ನ ಇಮೇಜ್ ಉಂಟಾದ ಧಕ್ಕೆ ಸರಿಪಡಿಸಲು ಎಂಬಂತೆ ಅದು ಈ ಕಾರ್ಯಕ್ರಮ ಆಯೋಜಿಸಿದೆ. ಅದಕ್ಕೆ ಪ್ರತಿಯಾಗಿ ಹಿಂದೂ ಸಂಘಟನೆಗಳು ಅಯ್ಯಪ್ಪ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಂಡಿದ್ದವು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.