
ನವದೆಹಲಿ (ಮಾ.23): ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಷಿ ಹಾಗೂ ಬಾಬ್ರಿ ಮಸೀದಿ ಧ್ವಂಸ ಆರೋಪಿಗಳಿಗೆ ಲಿಖಿತ ರೂಪದಲ್ಲಿ ಹೇಳಿಕೆಗಳನ್ನು ಸಲ್ಲಿಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.
ಪ್ರಕರಣಕ್ಕೆಸಂಬಂಧಿಸಿದವರೆಲ್ಲರಿಗೆ ತಮ್ಮ ವಾದವನ್ನು ಬರಹ ರೂಪದಲ್ಲಿ ಏ.6ರ ಮುಂಚೆ ಸಲ್ಲಿಸುವಂತೆ ನ್ಯಾ. ಪಿ.ಸಿ.ಘೋಷ್ ಹಾಗೂ ನ್ಯಾ. ಆರ್.ಎಫ್. ನಾರಿಮನ್ ಅವರನ್ನೊಳಗೊಂಡ ಪೀಠವು. ಪ್ರಕರಣವನ್ನು ಏ.7ಕ್ಕೆ ಆಲಿಸುವುದಾಗಿ ಹೇಳಿದೆ.
ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಡ್ವಾಣಿ, ಜೋಷಿ ಹಾಗೂ ಉಮಾ ಭಾರತಿ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪವನ್ನು ಕೈಬಿಡದಿರಲು ಸುಪ್ರೀಂ ಕೋರ್ಟ್ ನಿರ್ಧರಿಸಿತ್ತು.
ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿ ಎರಡು ಪ್ರಕರಣಗಳು ದಾಖಲಾಗಿದ್ದು, ಒಂದರಲ್ಲಿ ‘ಹೆಸರಿಸ್ಪಡದ’ ಕರಸೇವಕರ ವಿರುದ್ಧ ದೂರು ದಾಖಲಾಗಿದ್ದು, ಅದು ಲಕ್ನೋ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಇನ್ನೊಂದು ದೂರಿನಲ್ಲಿ ಅಡ್ವಾಣಿ, ಜೋಷಿ, ಉಮಾ ಭಾರತಿ ಸೇರಿದಂತೆ 13 ಮಂದಿ ವಿರುದ್ಧ ಬಾಬ್ರಿ ಮಸೀದಿ ಧ್ವಂಸದ ಷಡ್ಯಂತ್ರ ರಚಿಸಿದ್ದಾರೆಂದು ಆರೋಪಿಸಲಾಗಿತ್ತು. ಆ ಪ್ರಕರಣ ವಿಚಾರಣೆ ನಡೆಸುತ್ತಿರುವ ರಾಯ್ ಬರೇಲಿ ಕೋರ್ಟ್ ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು.
ಆದರೆ ಆರೋಪಗಳನ್ನು ಕೈಬಿಡುವ ವಿರುದ್ಧ ಅಹಮದ್ ಎಂಬವರು ಹಾಗೂ ಸಿಬಿಐಯು ಮೇಲ್ಮನವಿ ಸಲ್ಲಿಸಿದ್ದು ವಿಚಾರಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.