
ಬೆಂಗಳೂರು(ಅ.8): ಕಾವೇರಿ ನೀರು ಹಂಚಿಕೆ ವಿಚಾರಣೆಗೆ ಸುಪ್ರಿಂ ಕೋರ್ಟ್ ತ್ರಿಸದಸ್ಯ ಪೀಠವನ್ನು ಪುನರಚಿಸಿದೆ. ಹೊಸದಾಗಿ ರಚಿಸಿರುವ ಪೀಠದಲ್ಲಿ ನ್ಯಾ.ದೀಪಕ್ ಮಿಶ್ರಾ, ನ್ಯಾ.ಅಮಿತಾಬ್ ರಾಯ್,
ನ್ಯಾ. ಖನ್ವಿಲ್ಕರ್ ಒಳಗೊಂಡಿರುತ್ತಾರೆ. ಹೊಸ ಸದಸ್ಯ ಪೀಠದಲ್ಲಿ ನ್ಯಾಯಮೂರ್ತಿ ಉದಯ್ ಲಲಿತ್ ಇರುವುದಿಲ್ಲ. ಹಲವು ವರ್ಷಗಳ ಕಾಲ ಜಯಲಲಿತಾ ಪರ ವಕೀಲರಾಗಿದ್ದ ಉದಯ್ ಲಲಿತ್ ಕಾವೇರಿ ವಿಚಾರಣಾ ಸಮಿತಿಯ ದ್ವಿಸದಸ್ಯ ಪೀಠದಲ್ಲಿ ಒಬ್ಬರಾಗಿದ್ದರು. ಇವರು ವಿಚಾರಣೆ ನಡೆಸಬಾರದಂದು ಕರ್ನಾಟಕ ಮನವಿ ಸಲ್ಲಿಸಿತ್ತು. ಕರ್ನಾಟಕದ ಮನವಿಗೆ ಸುಪ್ರಿಂ ಮನ್ನಣೆ ನೀಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.