ಮಾಧ್ಯಮದ ವಿರುದ್ಧದ ಜೈ ಶಾ ಮಾನನಷ್ಟ ಮೊಕದ್ದಮೆಗೆ ಸುಪ್ರಿಂ ತಡೆ

Published : Mar 15, 2018, 07:02 PM ISTUpdated : Apr 11, 2018, 12:58 PM IST
ಮಾಧ್ಯಮದ ವಿರುದ್ಧದ ಜೈ ಶಾ ಮಾನನಷ್ಟ ಮೊಕದ್ದಮೆಗೆ ಸುಪ್ರಿಂ ತಡೆ

ಸಾರಾಂಶ

ಮಾಧ್ಯಮದ ಬಗ್ಗೆ ಕಿಡಿಕಾರಿದ ಮುಖ್ಯ ನ್ಯಾಯಮೂರ್ತಿಗಳು'ಮಾಧ್ಯಮಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು. ವಾಸ್ತವವನ್ನು ಬಿಟ್ಟು ತನ್ನಿಷ್ಟಕ್ಕೆ ತಾನು ಏನು ಬರೆಯುವಂತಿಲ್ಲ. ಈ ಬಗ್ಗೆ ನಾನು ಹಲವು ಸಲ ಹೇಳಿದ್ದೇನೆ ಎಂದು ತಿಳಿಸಿದರು.

ನವದೆಹಲಿ(ಮಾ.15): ಸುಪ್ರೀಂ ಕೋರ್ಟ್  ’ದಿ ವೈರ್’ ಹಾಗೂ ಅದರ ಸುದ್ದಿಗಾರರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಪುತ್ರ ಜೈ ಶಾ ಹೂಡಿರುವ ಮಾನನಷ್ಟ ಮೊಕದ್ದಮೆಗೆ  ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಜಯ್ ಶಾ ಗುಜರಾತಿನ ವಿಚಾರಣಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದು ಇದಕ್ಕೆ ಸುಪ್ರೀಂ ಕೋರ್ಟ್ ಏಪ್ರಿಲ್ 12 ರವರೆಗೆ ವಿಚಾರಣೆ ನಡೆಸಬಾರದೆಂದು ಎಂದು ಆದೇಶಿಸಿದೆ. ಅಲ್ಲದೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಪತ್ರಕರ್ತರ ವಿರುದ್ಧ ಸಲ್ಲಿಸಿರುವ ದೂರನ ಬಗ್ಗೆ ಜೈ ಶಾ ಹಾಗೂ ಇತರರು ತಿಳಿಸುವಂತೆ ಸೂಚಿಸಿದೆ.

ಇದೇ ಸಂದರ್ಭದಲ್ಲಿ ಮಾಧ್ಯಮದ ಬಗ್ಗೆ ಕಿಡಿಕಾರಿದ ಮುಖ್ಯ ನ್ಯಾಯಮೂರ್ತಿಗಳು'ಮಾಧ್ಯಮಗಳು ಹೆಚ್ಚು ಜವಾಬ್ದಾರಿಯುತವಾಗಿರಬೇಕು. ವಾಸ್ತವವನ್ನು ಬಿಟ್ಟು ತನ್ನಿಷ್ಟಕ್ಕೆ ತಾನು ಏನು ಬರೆಯುವಂತಿಲ್ಲ. ಈ ಬಗ್ಗೆ ನಾನು ಹಲವು ಸಲ ಹೇಳಿದ್ದೇನೆ ಎಂದು ತಿಳಿಸಿದರು.

ಅಮಿತ್ ಶಾ ಪುತ್ರ ಜೈ ಶಾ ಅವರ ಸಂಸ್ಥೆಯು ಹೆಚ್ಚು ಆದಾಯ ಹೊಂದಿರುವುದರ ಬಗ್ಗೆ  ಬಗ್ಗೆ ’ದಿ ವೈರ್’ ಲೇಖನ ಪ್ರಕಟಿಸಿತ್ತು. ಈ ಸಂಬಂಧ ಶಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯನ್ನು ವಜಾಗೊಳಿಸುವಂತೆ ವೈರ್'ನ ಪತ್ರಕರ್ತರು ಗುಜರಾತ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!