36 ಸಾವಿರ ಕ್ಯೂಸೆಕ್​ ನೀರು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಕೋರ್ಟ್ ಸೂಚನೆ

Published : Sep 30, 2016, 03:55 AM ISTUpdated : Apr 11, 2018, 01:11 PM IST
36 ಸಾವಿರ ಕ್ಯೂಸೆಕ್​ ನೀರು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಕೋರ್ಟ್ ಸೂಚನೆ

ಸಾರಾಂಶ

ನವದೆಹಲಿ(ಸೆ.30): ಕಾವೇರಿ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೆ ಹಿನ್ನಡೆಯಾಗಿದೆ. ಅ.1ರಿಂದ ಅ.6 ರವರೆಗೆ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸಿರುವ ಸುಪ್ರೀಂ ಕೋರ್ಟ್ ಕರ್ನಾಟಕದ ವಾದಕ್ಕೆ ಎಳ್ಳು, ನೀರು ಬಿಟ್ಟಿದೆ.

ಅ.1ರಿಂದ ಅ.6 ರವರೆಗೆ ತ.ನಾಡಿಗೆ 6 ಸಾವಿರ ಕ್ಯೂಸೆಕ್​ ನೀರು ಬಿಡಬೇಕು ಎಂದು ತೀರ್ಪು ನೀಡಿರುವ ಸುಪ್ರೀಂ, ಒಟ್ಟು 36 ಸಾವಿರ ಕ್ಯೂಸೆಕ್​ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ಇಷ್ಟೇ ಅಲ್ಲದೆ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

ಅ.4ರೊಳಗೆ ಕಾವೇರಿ ಮಂಡಳಿ ರಚಿಸಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಆದೇಶ ಪಾಲಿಸಿಲ್ಲ. ಇದರಿಂದ ನ್ಯಾಯಾಂಗ ವ್ಯವಸ್ಥೆಗೆ ಧಕ್ಕೆ ತಂದಿದೆ. ದೇಶದ ಎಲ್ಲಾ ರಾಜ್ಯಗಳು ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕರ್ನಾಟಕ ರಾಜ್ಯವೂ ಒಂದು. ನ್ಯಾಯಾಂಗದ ಆದೇಶವನ್ನು ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದೇ ವೇಳೆ ಕರ್ನಾಟಕ ಪರ ವಕೀಲ ವಾದ ಮಂಡನೆಯಿಂದ ಹಿಂದೆ ಸರಿದಿದ್ದಾರೆ ಎಂಬ ವಿಚಾರವೂ ಮೂಲಗಳಿಂದ ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಪ್ತ ಸಾಗರದಾಚೆ ನಂತರ ಹೇಮಂತ್‌ ರಾವ್‌ ಹೊಸ ಸಿನಿಮಾ, ಕನ್ನಡಕ್ಕೆ ಮತ್ತೆ ಬಂದ ಆಳ್ವಾಸ್‌ ಕಾಲೇಜಿನ ಹೀರೋಯಿನ್‌!
ರಾತ್ರಿಯನ್ನು ಆಳುವ ಹುಡುಗಿ & 'ಮಿಲಿಯನೇರ್ ಮೈಂಡ್‌ಸೆಟ್' ಹೊಂದಿರೋ ಹುಡುಗನ ಹಾಡು: ಚಂದನ್ ಶೆಟ್ಟಿ