
ನವದೆಹಲಿ (ಸೆ.19): 2002 ಗುಜರಾತ್ ಹತ್ಯಾಕಾಂಡ ಸಂದರ್ಭದಲ್ಲಿ ನಡೆದ ನರೋಡಾ ಗಾಮ್ ನರಮೇಧ ಪ್ರಕರಣದ ತನಿಖೆಯನ್ನು ಆರು ತಿಂಗಳಿನೊಳಗೆ ಪೂರ್ಣಗೊಳಿಸುವಂತೆ ಇಂದು ಸುಪ್ರೀಮ್ ಕೋರ್ಟ್ ಸ್ಥಳೀಯ ನ್ಯಾಯಾಲಕ್ಕೆ ಆದೇಶಿಸಿದೆ.
ನರೋಡಾ ಗಾಮ್ ನರಮೇಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಕ್ಷ್ಯ ನಾಶ ಮಾಡಿದ ಆರೋಪದಲ್ಲಿ ಮಾಜಿ ಪೊಲೀಸ್ ಅಧಿಕಾರಿ ರಾಹುಲ್ ಶರ್ಮಾ ಹಾಗೂ ಮಾಜಿ ತನಿಖಾಧಿಕಾರಿ ಪಿ.ಎಲ್.ಮಾಲ್ ಅವರನ್ನು ತನಿಖೆ ನಡೆಸಬೇಕೆಮದು ಕೊರಿ ಆರೋಪಿಯೊಬ್ಬರು ದಾವೆ ಹೂಡಿದ್ದರು. ಆದರೆ ಪ್ರಕರಣವನ್ನು ಆಲಿಸುತ್ತಿರುವ ಅಹಮದಾಬಾದ್ ವಿಶೇಷ ನ್ಯಾಯಾಲಯವು ಜೂನ್ 2015ರಲ್ಲಿ ಆದೇಶವನ್ನು ತಡೆದಿರಿಸಿತ್ತು.
ಫೆಬ್ರವರಿ 28, 2002ರಂದು ನಡೆದ ನರೋಡಾ ಪಾಟಿಯಾ ದಂಗೆಯಲ್ಲಿ 11 ಮಂದಿ ಮೃತಪಟ್ಟಿದ್ದರು.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.