
ನವದೆಹಲಿ (ಜ.10): ಎನ್ ಜಿಓ ಗಳಿಗೆ ಬರುವ ಅನುದಾನಗಳ ಕುರಿತು ಲೆಕ್ಕಪತ್ರಗಳನ್ನು ಕೇಂದ್ರ ಸರ್ಕಾರ ಸರಿಯಾಗಿ ನಿರ್ವಹಣೆ ಮಾಡಿಲ್ಲವೆಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಒಟ್ಟು 32 ಲಕ್ಷ ಎನ್ ಜಿಓಗಳಲ್ಲಿ ಕೇವಲ 3 ಲಕ್ಷ ಎನ್ ಜಿಒಗಳು ಮಾತ್ರ ಲೆಕ್ಕಪತ್ರಗಳ ವಿವರವನ್ನು ಸಲ್ಲಿಕೆ ಮಾಡಿದೆ ಎಂದು ವಕೀಲ ಮನೋಹರ್ ಲಾಲ್ ಶರ್ಮಾ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಕೈಗೆತ್ತಿಕೊಂಡ ನ್ಯಾ. ಜಗದೀಶ್ ಸಿಂಗ್ ಖೇಹರ್ ಪೀಠವು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.
ಇದುವರೆಗೆ ಯಾವ ಎನ್ ಜಿಒಗಳು ತಮಗೆ ಬಂದಿರುವ ಅನುದಾನಗಳ ಬಗ್ಗೆ ಲೆಕ್ಕಪತ್ರಗಳನ್ನು ಸಲ್ಲಿಸಿಲ್ಲವೋ, ಸಾರ್ವಜನಿಕ ಅನುದಾನಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾವೋ, ಬೇರೆ ಉದ್ದೇಶಗಳಿಗೆ ಬಳಸಿಕೊಂಡಿದ್ದಾವೋ ಅದನ್ನು ಸಿವಿಲ್ ಹಾಗೂ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುವುದು ಎಂದು ಸುಪ್ರೀಂಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ. ಜೊತೆಗೆ ದೇಶಾದ್ಯಂತ ಇರುವ ಎನ್ ಜಿಓಗಳ ಲೆಕ್ಕಪತ್ರಗಳನ್ನು ಆಡಿಟ್ ಮಾಡಲು ತಯಾರಿ ನಡೆಸಿ ಎಂದು ಕೇಂದ್ರಕ್ಕೆ ನಿರ್ದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.