ಕನ್ನಡತಿ ನ್ಯಾ ಮಂಜುಳಾಗೆ ಬಡ್ತಿ ತಪ್ಪಿದ್ದಕ್ಕೆ ಸುಪ್ರೀಂ ಜಡ್ಜ್ ಅತೃಪ್ತಿ

Published : Mar 03, 2017, 06:04 PM ISTUpdated : Apr 11, 2018, 01:06 PM IST
ಕನ್ನಡತಿ ನ್ಯಾ ಮಂಜುಳಾಗೆ ಬಡ್ತಿ ತಪ್ಪಿದ್ದಕ್ಕೆ ಸುಪ್ರೀಂ ಜಡ್ಜ್ ಅತೃಪ್ತಿ

ಸಾರಾಂಶ

ಸುಪ್ರೀಂಕೋರ್ಟ್‌ನ ಹಿಂದಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕ ಮಾಡಬೇಕಾದ ನ್ಯಾಯಮೂರ್ತಿಗಳ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದರು

ನವದೆಹಲಿ(ಮಾ.03): ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ಪಡೆಯಬೇಕಾದ ನ್ಯಾಯಾಧೀಶರ ಪಟ್ಟಿಯಿಂದ ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ಬಳ್ಳಾರಿ ಮೂಲದ ಮಂಜುಳಾ ಚೆಲ್ಲೂರ್ ಹೆಸರು ಕೈಬಿಟ್ಟಿದ್ದಕ್ಕೆ ನ್ಯಾಯಾಧೀಶರ ನೇಮಕಕ್ಕೆ ಸಂಬಂಧಿಸಿದ ‘ಕೊಲಿಜಿಯಂ’ ಸದಸ್ಯರೊಬ್ಬರಿಂದಲೇ ಆಕ್ಷೇಪ ವ್ಯಕ್ತವಾಗಿದೆ.

ಸುಪ್ರೀಂಕೋರ್ಟ್‌ನ ಹಿಂದಿನ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ನೇಮಕ ಮಾಡಬೇಕಾದ ನ್ಯಾಯಮೂರ್ತಿಗಳ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದರು. ಅದರಲ್ಲಿ ಕನ್ನಡಿಗರಾದ ನ್ಯಾ ಮೋಹನ ಶಾಂತನಗೌಡರ್, ನ್ಯಾ ಅಬ್ದುಲ್ ನಜೀರ್ ಜತೆಯಲ್ಲೇ ನ್ಯಾ ಮಂಜುಳಾ ಚೆಲ್ಲೂರ್ ಮತ್ತಿತರರ ಹೆಸರಿತ್ತು. ಆ ಪಟ್ಟಿಯಲ್ಲಿದ್ದ ಏಕೈಕ ಮಹಿಳೆ ಕೂಡ ಮಂಜುಳಾ ಆಗಿದ್ದರು. ಆದರೆ ನ್ಯಾ ಜೆ.ಎಸ್. ಖೇಹರ್ ಅವರು ಮುಖ್ಯ ನ್ಯಾಯಮೂರ್ತಿಯಾದ ಬಳಿಕ ಸರ್ಕಾರಕ್ಕೆ ಕಳುಹಿಸಲಾದ ಅಂತಿಮ ಪಟ್ಟಿಯಲ್ಲಿ ಚೆಲ್ಲೂರ್ ಹೆಸರನ್ನು ಕೈಬಿಡಲಾಗಿದೆ.

ಈ ಬಗ್ಗೆ ಕೊಲಿಜಿಯಂನ ಸದಸ್ಯರಾಗಿರುವ ನ್ಯಾ ಚೆಲಮೇಶ್ವರ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಚೆಲ್ಲೂರ್ ಹೆಸರು ಕೈಬಿಟ್ಟಿದ್ದಕ್ಕೆ ಕಾರಣ ದಾಖಲಿಸಬೇಕು ಎಂದು ಹೇಳಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಂಗ್ಲದೈನಿಕವೊಂದು ವರದಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?