ಅಸಾರಾಂ ಬಾಪುಗೆ ಇನ್ನು ಜೈಲೇಗತಿ

Published : Sep 05, 2016, 06:07 PM ISTUpdated : Apr 11, 2018, 01:02 PM IST
ಅಸಾರಾಂ ಬಾಪುಗೆ  ಇನ್ನು ಜೈಲೇಗತಿ

ಸಾರಾಂಶ

ನವದೆಹಲಿ(ಸೆ.06): ಸ್ವಯಂ ಘೋಷಿತ ದೇವಮಾನವ ಅಸರಾಂ ಬಾಪುಗೆ ಮತ್ತೆ ಹಿನ್ನೆಡೆಯುಂಟಾಗಿದ್ದು, ಮಧ್ಯಂತರ ಜಾಮೀನು ನೀಡಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

ಅತ್ಯಾಚಾರ ಮತ್ತು ಕೊಲೆ ಆರೋಪ ಹೊತ್ತು ಜೈಲು ಸೇರಿರುವ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ಅವರು ಈ ಹಿಂದೆ ಅನಾರೋಗ್ಯ ಉಂಟಾಗಿದ್ದು, ಪಂಚಕರ್ಮ ಆಯುರ್ವೇದ ಚಿಕಿತ್ಸೆ ಪಡೆದುಕೊಳ್ಳಲು ಕೇರಳ ರಾಜ್ಯಕ್ಕೆ ಹೋಗಬೇಕಾದ್ದರಿಂದ ಮಧ್ಯಂತರ ಜಾಮೀನು ನೀಡುವಂತೆ ಸುಪ್ರೀಂ ಬಳಿ ಮನವಿ ಮಾಡಿದ್ದರು. 

ಈ ಅರ್ಜಿಯನ್ನು ಆ.11 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿತ್ತು. ಅಲ್ಲದೆ, ಅಸಾರಾಂ ಅವರು ಹೇಳುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಪರೀಕ್ಷಿಸಲು ತ್ರಿಸದಸ್ಯ ವೈದ್ಯಕೀಯ ಸಮಿತಿಯೊಂದನ್ನು ರಚಿಸುವಂತೆ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಆದೇಶ ನೀಡಿತ್ತು. ಇದರಂತೆ ಮತ್ತೆನಿನ್ನೆ ನಡೆದ ವಿಚಾರಣೆಯಲ್ಲಿಯೂ ಕೂಡ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುರ್ಚಿ ಸರ್ಕಸ್‌ ಮಧ್ಯೆ ಇಂದು ಸಿದ್ದು ದೆಹಲಿಗೆ - ನಾಳೆ ಸಿಡಬ್ಲುಸಿ ಸಭೆಯಲ್ಲಿ ಸಿಎಂ ಭಾಗಿ
ಸಲಹೆ ಕೊಟ್ಟರೆ ದುರಹಂಕಾರದ ಮಾತು: ರಾಜ್ಯ ಸರ್ಕಾರದ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ