ಮಾಜಿ ಸಿಎಂ ಕೃಷ್ಣ, ಎಚ್‌ಡಿಕೆಗೆ  ಸಂಕಷ್ಟ

Published : Sep 19, 2016, 03:16 PM ISTUpdated : Apr 11, 2018, 01:03 PM IST
ಮಾಜಿ ಸಿಎಂ ಕೃಷ್ಣ, ಎಚ್‌ಡಿಕೆಗೆ  ಸಂಕಷ್ಟ

ಸಾರಾಂಶ

ಬೆಂಗಳೂರು (ಸೆ.19): ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಹಾಗೂ ಎಚ್.​ಡಿ.ಕುಮಾರಸ್ವಾಮಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುವಂತೆ ಸುಪ್ರೀಂಕೋರ್ಟ್​ ಆದೇಶಿಸಿದೆ.

ಎಸ್.ಎಂ.ಕೃಷ್ಣ ಹಾಗೂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅರಣ್ಯ ಭೂಮಿಯನ್ನು ಗಣಿಗಾರಿಕೆಗೆ ನೀಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ದೂರು ನೀಡಿದ್ದರು.

ಈ ಸಂದರ್ಭದಲ್ಲಿ  2012ರಲ್ಲಿ ಸುಪ್ರೀಂಕೋರ್ಟ್​, ಲೋಕಾಯುಕ್ತ ತನಿಖೆಗೆ ತಡೆ ನೀಡಿತ್ತು. ಹೀಗಾಗಿ ಸಾಮಾಜಿಕ ಕಾರ್ಯಕರ್ತ ಟಿ .ಜೆ.ಅಬ್ರಾಹಂ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್​ ಪ್ರಕರಣದ ತನಿಖೆ ಎಸ್​ಐಟಿಗೆ ವಹಿಸಲು ಆದೇಶಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ