
ನವದೆಹಲಿ (ಡಿ.13): ನ್ಯಾ. ಲೋಧಾ ಸಮಿತಿ ಶಿಫಾರಸ್ಸುಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕು ಎಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಬಿಸಿಸಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇಂದು ತಳ್ಳಿ ಹಾಕಿದೆ.
ನ್ಯಾ. ಲೋಧಾ ಸಮಿತಿ ಶಿಫಾರಸ್ಸುಗಳನ್ನು ಪಾಲಿಸಬೇಕೆಂದು ಸುಪ್ರೀಂಕೋರ್ಟ್ ಜುಲೈ 18 ರಂದು ತೀರ್ಪು ನೀಡಿತ್ತು. ಇದನ್ನು ಬಿಸಿಸಿಐ ಉಲ್ಲಂಘಿಸುತ್ತಲೇ ಬಂದಿದೆ. ಇದು ನ್ಯಾಯಾಲಯದ ಅಸಮಾಧಾನಕ್ಕೂ ಸಹ ಕಾರಣವಾಗಿದೆ.
ಬಿಸಿಸಿಐ ಮೇಲ್ಮನವಿಯನ್ನು ನಾವು ಕೂಲಂಕುಷವಾಗಿ ಪರಿಶೀಲಿಸಿದ್ದೇವೆ. ಜುಲೈ 18 ರಂದು ನಾವು ನೀಡಿದ ಆದೇಶದಲ್ಲಿ ಯಾವುದೇ ತಪ್ಪಿಲ್ಲ ಎಂಬುದು ಸ್ಪಷ್ಟ. ಹಾಗಾಗಿ ಬಿಸಿಸಿಐ ಮೇಲ್ಮನವಿಯನ್ನು ತಳ್ಳಿ ಹಾಕಿದ್ದೇವೆ ಎಂದು ಮುಖ್ಯ ನ್ಯಾ.ಠಾಕೂರ್
ಹಾಗೂ ಎಸ್.ಎ ಬೋಬ್ಡೆ ನ್ಯಾಯಪೀಠವು ಹೇಳಿದೆ.
ನಾಳೆ ಅಂತಿಮ ವಿಚಾರಣೆ ನಡೆಯಲಿದ್ದು, ಒಂದು ದಿನ ಮುನ್ನವೇ ನ್ಯಾಯಾಲಯ ಮೇಲ್ಮನವಿಯನ್ನು ವಜಾಗೊಳಿಸಿದೆ. ನಾಳೆ ಬಿಸಿಸಿಐ ಭವಿಷ್ಯ ನಿರ್ಧಾರವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.