ಸುಬ್ರತಾ ರಾಯ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

Published : Nov 28, 2016, 12:03 PM ISTUpdated : Apr 11, 2018, 12:43 PM IST
ಸುಬ್ರತಾ ರಾಯ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಸಾರಾಂಶ

ಸಹಾರ ಕಂಪನಿಯ ಮುಖ್ಯಸ್ಥ ಸುಬ್ರತಾ ರಾಯ್ ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಅವರ ಮಧ್ಯಾಂತರ ಜಾಮೀನು ಅವಧಿಯನ್ನು ವಿಸ್ತರಿಸಿದೆ.

ನವದೆಹಲಿ (ನ.28): ಸಹಾರ ಕಂಪನಿಯ ಮುಖ್ಯಸ್ಥ ಸುಬ್ರತಾ ರಾಯ್ ಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ. ಸುಪ್ರೀಂ ಕೋರ್ಟ್ ಅವರ ಮಧ್ಯಾಂತರ ಜಾಮೀನು ಅವಧಿಯನ್ನು ವಿಸ್ತರಿಸಿದೆ.

ಭಾರತೀಯ ಭದ್ರತಾ ಮತ್ತು ವಿನಿಮಯ ಮಂಡಳಿಗೆ (ಸೆಬಿ)  ಫೆ.06 2017 ರೊಳಗೆ ರೂ.600 ಕೋಟಿಯನ್ನು ಪಾವತಿಸುವಂತೆ ಸುಪ್ರೀಂ ಆದೇಶಿಸಿದೆ.

ಸುಬ್ರತಾ ರಾಯ್ ಪರ ವಕೀಲ ಕಪಿಲ್ ಸಿಬಲ್, ಮುಖ್ಯ ನ್ಯಾ. ಟಿ.ಎಸ್ ಠಾಕೂರ್ ನೇತೃತ್ವದ ತ್ರಿ ಸದಸ್ಯ ನ್ಯಾಯಪೀಠದೆದುರು ಪ್ರಸ್ತಾವನೆ ಸಲ್ಲಿಸಿ ಎರಡೂವರೆ ವರ್ಷದೊಳಗೆ ರೂ. 11000 ಕೋಟಿಯನ್ನು ಪಾವತಿಸುವುದಾಗಿ ಹೇಳಿದರು.

“ನೀವು 1 ಲಕ್ಷ 87 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿದ್ದೀರಿ. ಆದರೆ ಇನ್ನೂ ಸಹ ನಿಮಗೆ ಹಣವನ್ನು ಪಾವತಿ ಮಾಡಲು ಸಾಧ್ಯವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿಂದಿಸಿದ ಕೆಎಫ್‌ಸಿ ಮ್ಯಾನೇಜರ್ ವಿರುದ್ದ ಕೇಸ್, ₹81 ಲಕ್ಷ ಪರಿಹಾರ ಪಡೆದ ಭಾರತೀಯ ಮೂಲದ ಉದ್ಯೋಗಿ
ವಿದೇಶದಲ್ಲಿ ಪಾಸ್‌ಪೋರ್ಟ್ ಕಳೆದುಹೋದರೆ ತಕ್ಷಣ ಮಾಡಬೇಕಾದ ಕೆಲಸವಿದು, ತಿಳ್ಕೊಳ್ಳಿ!