
ನವದೆಹಲಿ(ಜು.03): ಪಿಐಎಲ್ ಅಂದ್ರೆ ಸಾರ್ವಜನಿಕಾ ಹಿತಾಸಕ್ತಿ ಅರ್ಜಿಯನ್ನ ದುರ್ಬಳಕೆ ಮಾಡಿದ್ದಕ್ಕೆ ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ಅವರಿಗೆ ಸುಪ್ರೀಂ ಕೋರ್ಟ್ 25 ಲಕ್ಷ ರೂ. ದಂಡ ವಿಧಿಸಿದೆ. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡುವ ಸಂಬಂಧ ಅಬ್ರಾಹಂ ಪಿಐಎಲ್ ಸಲ್ಲಿಸಿದ್ದರು. ಖಾಸಗಿಯವರು ಜಾಗ ನೀಡಿದ್ದರೂ ಸರ್ಕಾರಿ ಜಾಗದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣ ಮಾಡಲಾಗುತ್ತಿದೆ ಅಂತ ಅಬ್ರಾಹಂ ಅರ್ಜಿಯಲ್ಲಿ ದೂರಿದ್ದರು. ವಿಚಾರಣೆ ನಡೆಸಿದ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಪಿಐಎಲ್ ದುರ್ಬಳಕೆ ಮಾಡಿದ್ದೀರಿ ಅಂತ ಅಭಿಪ್ರಾಯ ವ್ಯಕ್ತಪಡಿಸಿ 25 ಲಕ್ಷ ರೂ. ದಂಡ ವಿಧಿಸಿದೆ. ಅಷ್ಟೇ ಅಲ್ಲದೇ ಈ ದಂಡವನ್ನು ಎರಡು ವಾರದಲ್ಲಿ ಕಟ್ಟುವಂತೆ ಸೂಚಿಸಿದೆ. ಪ್ರಕರಣ ಸಂಬಂಧಪಟ್ಟಂತೆ ರಾಜ್ಯದ ಪರ ಅಡ್ವೋಕೇಟ್ ಜನರಲ್ ಮಧುಸೂದನ್ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.