
ನವದೆಹಲಿ (ಜ.23): ಹೊಸ ಸಿಮ್ ಕಾರ್ಡ್ ನೀಡುವಾಗ ಗ್ರಾಹಕರ ವಿವರಗಳನ್ನು ಸಮರ್ಪಕವಾಗಿ ಪರಿಶೀಲನೆ ಮಾಡುವ ವ್ಯವಸ್ಥೆಯನ್ನು ಎರಡು ವಾರಗಳೊಳಗೆ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ನಕಲಿ ದಾಖಲೆಗಳನ್ನು ನೀಡಿ ಸಿಮ್ ಕಾರ್ಡ್ ಪಡೆಯುವ ಹಾಗೂ ಅವುಗಳನ್ನು ಅಪರಾಧ ಚಟುವಟಿಕೆಗಳಿಗೆ ದುರ್ಬಳಕೆ ಮಾಡುವ ಪ್ರವೃತಿಗೆ ಕಡಿವಾಣ ಹಾಕಲು ಸಮರ್ಪಕವಾದ ಪರಿಶೀಲನೆ ಮುಖ್ಯವಾಗಿದೆಯೆಂದು ಮುಖ್ಯ ನ್ಯಾಯಾಧೀಶ ಜೆ.ಎಸ್.ಖೆಹರ್ ಹೇಳಿದ್ದಾರೆ.
ಸಿಮ್ ಕಾರ್ಡ್’ಗಳನ್ನು ನೀಡುವಾಗ ಗ್ರಾಹಕರ ವಿವರಗಳನ್ನು ಸರಿಯಾಗಿ ಪರಿಶೀಲನೆ ಮಾಡುವ ವ್ಯವಸ್ಥೆಯಿಲ್ಲದಿರುದು ದೇಶದ ಭದ್ರತೆಗೆ ಅಪಾಯವುಂಟು ಮಾಡಬಹುದೆಂದು ವಾದಿಸಿ ಲೋಕನೀತಿ ಪ್ರತಿಷ್ಠಾನ ಎಂಬ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.