
ಬೆಂಗಳೂರು(ಡಿ.15): ರಾಜ್ಯ ಹೆದ್ದಾರಿ ಯೋಜನೆಯ ಮುಖ್ಯ ಯೋಜನಾಧಿಕಾರಿ ಎಸ್.ಸಿ ಜಯಚಂದ್ರಗೆ ಸಿಬಿಐ ವಿಶೇಷ ಕೋರ್ಟ್ ಮಧ್ಯಂತರ ಷರತ್ತುಬದ್ಧ ಜಾಮೀನು ನೀಡಿದೆ.
ಪ್ರಿವೆನ್ಸನ್ ಆಫ್ ಮನಿ ಲಾಂಡರಿನ್ ಆ್ಯಕ್ಟ್ ಅನ್ವಯ ಬಂಧಿಸಲಾಗಿದ್ದ ಎಸ್.ಸಿ ಜಯಚಂದ್ರ ಅವರ ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ಅವರಿಗೆ ಡಿಸೆಂಬರ್ 22ರವರೆಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಸಾಕ್ಷ್ಯನಾಶ ಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಪಾಸ್'ಪೋರ್ಟ್ ಕೋರ್ಟ್'ಗೆ ಹಾಜರುಪಡಿಸಬೇಕು, ಬೆಂಗಳೂರು ಬಿಟ್ಟು ಹೋಗಬಾರದು ಎಂಬ ಷರತ್ತಿನನ್ವಯ ಜಯಚಂದ್ರಗೆ ಜಾಮೀನು ಮಂಜೂರು ಮಾಡಲಾಯಿತು.
ಇಡಿ ಪರವಾಗಿ ಕೇಂದ್ರ ಸರ್ಕಾರದ ಸಹಾಯಕ ಸಾಲಿಸಿಟರ್ ಜನರಲ್ ಕೃಷ್ಣ ಧೀಕ್ಷಿತ್ ವಾದ ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.