ರಫೇಲ್‌ ಡೀಲ್‌: ಮೋದಿ ವಿರುದ್ಧ ದೂರಿಗೆ ಸುಪ್ರೀಂ ಆದೇಶ?

Published : Oct 22, 2018, 01:12 PM IST
ರಫೇಲ್‌ ಡೀಲ್‌: ಮೋದಿ ವಿರುದ್ಧ ದೂರಿಗೆ ಸುಪ್ರೀಂ ಆದೇಶ?

ಸಾರಾಂಶ

ರಫೇಲ್ ಡೀಲ್‌ನಲ್ಲಿ ನಡೆದಿದೆ ಎನ್ನಲಾದ ಹಗರಣ ಇದೀಗ ದಿನಕ್ಕೊಂದು ತಿರುವು ಪಡೆದಕೊಳ್ಳುತ್ತಿದೆ. ಇದನ್ನೇ ಬಳಸಿಕೊಳ್ಳುತ್ತಿರುವ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬುತ್ತಿದ್ದಾರೆ.  

ಬೆಂಗಳೂರು(ಅ.22): ರಫೇಲ್‌ ಡೀಲ್‌ನಲ್ಲಿ ಹಗರಣ ನಡೆದಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್‌ ಹೇಳುತ್ತಿದೆ. ಇತ್ತ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಒಪ್ಪಂದದಲ್ಲಿ ಯಾವುದೇ ಹಗರಣ ನಡೆದಿಲ್ಲ. ಇದು ಸರ್ಕಾರ-ಸರ್ಕಾರದ ನಡುವಿನ ಒಪ್ಪಂದ ಎಂದು ಪದೇಪದೇ ಹೇಳುತ್ತಿದೆ. 

ಆದರೆ ರಫೇಲ್‌ ಒಪ್ಪಂದದಲ್ಲಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಸುಪ್ರೀಂಕೋರ್ಟ್‌ ಆದೇಶ ನೀಡಿದೆ ಎಂದು ಎಬಿಪಿ ಸುದ್ದಿ ವಾಹಿನಿ ವರದಿ ಮಾಡಿರುವ ಸ್ಕ್ರೀನ್‌ ಶಾಟ್‌ ಚಿತ್ರ ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿದೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಆ ದೃಶ್ಯದಲ್ಲಿ ‘ಬ್ರೇಕಿಂಗ್‌ ನ್ಯೂಸ್‌, ರಫೇಲ್‌ ಒಪ್ಪಂದ ವಿಚಾರವಾಗಿ ಮೋದಿ ವಿರುದ್ಧ ದೂರು ದಾಖಲಿಸಿಕೊಳ್ಳುವಂತೆ ಸುಪ್ರೀಂ ಆದೇಶ’ ಎಂದಿದೆ.

ಆದರೆ ಸುಪ್ರೀಂಕೋರ್ಟ್‌ ಮೋದಿ ವಿರುದ್ಧ ಕೇಸು ದಾಖಲಿಸುವಂತೆ ಆದೇಶ ನೀಡಿದ್ದು ನಿಜವೇ ಎಂದು ಪರಿಶೀಲಿಸಿದಾಗ ಇದು ಸುಳ್ಳುಸುದ್ದಿ, ಗ್ರಾಫಿಕ್ಸ್‌ ಮೂಲಕ ಈ ರೀತಿಯ ಇಮೇಜನ್ನು ಸಿದ್ಧಪಡಿಸಲಾಗಿದೆ ಎಂಬುದು ಪತ್ತೆಯಾಗಿದೆ. ಈ ಬಗ್ಗೆ ಸ್ಪಷ್ಟೀಕರಣಕ್ಕೆ ಎಬಿಪಿ ಸುದ್ದಿವಾಹಿನಿಯ ಮ್ಯಾನೇಜಿಂಗ್‌ ಡೈರೆಕ್ಟರ್‌ ರಜ್ನೀಶ್‌ ಅಹುಜಾ ಅವರನ್ನೇ ಸಂಪರ್ಕಿಸಿದ್ದು, ಅವರು ‘ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರ ಎಬಿಪಿ ವಾಹಿನಿಯ ಫೋಟೋ ಅಲ್ಲ. 

ಎಬಿಪಿಯ ಫಾಂಟ್‌ಸೈಜ್‌ಗೂ ಇಲ್ಲಿ ಹರಿದಾಡುತ್ತಿರುವ ಚಿತ್ರದಲ್ಲಿರುವ ಫಾಂಟ್‌ ಸೈಜ್‌ಗೂ ಸಾಕಷ್ಟುವ್ಯತ್ಯಾಸವಿದೆ. ಫೋಟೋಶಾಪ್‌ ಮೂಲಕ ನಕಲಿ ಚಿತ್ರವನ್ನು ಸಿದ್ಧಪಡಿಲಾಗಿದೆ’ ಎಂದಿದ್ದಾರೆ. ಅಲ್ಲದೆ ಬೂಮ್‌ ಈ ಕುರಿತು ಯುಟ್ಯೂಬ್‌ನಲ್ಲಿ ಪರಿಶೀಲಿಸಿದ್ದು, ಅಲ್ಲಿ ಇತ್ತೀಚೆಗೆ ರಫೇಲ್‌ ಒಪ್ಪಂದ ಪ್ರಕ್ರಿಯೆಯ ಮಾಹಿತಿಯನ್ನು ಸುಪ್ರೀಂಕೋರ್ಟ್‌ ಕೇಳಿದ್ದ ಸುದ್ದಿ ಮಾತ್ರ ವರದಿಯಾಗಿದ್ದು ಕಂಡುಬಂದಿದೆ. ಹಾಗಾಗಿ ಈ ಸುದ್ದಿ ಸುಳ್ಳು ಎಂಬುದು ಸ್ಪಷ್ಟ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!