ಸುಪ್ರೀಂ ಆದೇಶದಂತೆ ಹೆಚ್ಚುತ್ತಾ ವೃದ್ಧರ ಪಿಂಚಣಿ?

Published : Dec 15, 2018, 08:50 AM IST
ಸುಪ್ರೀಂ ಆದೇಶದಂತೆ ಹೆಚ್ಚುತ್ತಾ ವೃದ್ಧರ ಪಿಂಚಣಿ?

ಸಾರಾಂಶ

ದೇಶದ ಹಿರಿಯ ನಾಗರಿಕರ ಪಿಂಚಣಿ ಹೆಚ್ಚಿಸಬೇಕು ಹಾಗೂ ಬಡತನ ರೇಖೆಗಿಂತ ಕೆಳಗಿರುವ ವೃದ್ಧರಿಗೆ ಜಿಲ್ಲೆಗೊಂದು ಪುನರ್ವಸತಿ ಕೇಂದ್ರ ಸ್ಥಾಪಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ನವದೆಹಲಿ: ದೇಶದಲ್ಲಿರುವ ಹಿರಿಯ ನಾಗರಿಕರಿಗೆ ನೀಡಲಾಗುತ್ತಿರುವ ಪಿಂಚಣಿ ಹಣ ಏರಿಕೆ ಮಾಡಬೇಕು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ ಪ್ರತಿ ಜಿಲ್ಲೆಗೊಂದು ಹಿರಿಯ ನಾಗರಿಕ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾದ ಮದನ್‌ ಬಿ. ಲೋಕೂರ್‌ ಹಾಗೂ ದೀಪಕ್‌ ಗುಪ್ತಾ ಅವರಿದ್ದ ಪೀಠ, ‘ಕುಟುಂಬ ಸದಸ್ಯರಿಂದ ತಿರಸ್ಕಾರಕ್ಕೊಳಗಾದ ಹಿರಿಯ ನಾಗರಿಕರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಿದೆ. ಅಲ್ಲದೆ, ಅವರ ಹಿತಾಸಕ್ತಿಗಳನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು,’ ಎಂದು ಹೇಳಿದರು. ಪ್ರಸ್ತುತ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಇಂದಿರಾಗಾಂಧಿ ರಾಷ್ಟ್ರೀಯ ಹಿರಿಯ ನಾಗರಿಕರ ಪಿಂಚಣಿ ಯೋಜನೆಯಡಿ ಕೇಂದ್ರ ಸರ್ಕಾರ 60-79ರ ಒಳಗಿನ ಹಿರಿಯ ನಾಗರಿಕರಿಗೆ ಪ್ರತೀ ತಿಂಗಳು 200 ರು. ಪಿಂಚಣಿ ನೀಡುತ್ತಿದೆ. ಅಲ್ಲದೆ, 80 ವರ್ಷ ಮೇಲ್ಪಟ್ಟಹಿರಿಯ ನಾಗರಿಕರಿಗೆ 500 ರು. ನೀಡಲಾಗುತ್ತಿದೆ. 2007ರಲ್ಲಿ ಜಾರಿಗೆ ಬಂದ ಬಳಿಕ ಇದುವರೆಗೂ ಪಿಂಚಣಿ ಮೊತ್ತವನ್ನು ಪರಿಷ್ಕರಣೆ ಮಾಡಿಯೇ ಇಲ್ಲ. ಹಾಗಾಗಿ, ಈ ಮೊತ್ತವನ್ನು ಹೆಚ್ಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಈ ಮೊತ್ತಕ್ಕೆ ರಾಜ್ಯ ಸರ್ಕಾರಗಳೂ ಹಣ ಸೇರಿಸಿ ವೃದ್ಧರಿಗೆ ನೀಡುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗುಜರಾತ್‌ನಲ್ಲೊಂದು ನಿರ್ಭಯಾ ಪ್ರಕರಣ
ಯುನೆಸ್ಕೋ ಪರಂಪರೆ ಪಟ್ಟಿಗೆ ದೀಪಾವಳಿ ಸೇರ್ಪಡೆ!