
ನವದೆಹಲಿ (ಡಿ.17): ಭಾರತ ಸಂವಿಧಾನದ ಹೊರತಾಗಿ ಜಮ್ಮು ಕಾಶ್ಮೀರ ಸಾರ್ವಭೌಮತ್ವವನ್ನು ಹೊಂದಿಲ್ಲವೆಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ನಮ್ಮ ರಾಜ್ಯಕ್ಕೆ ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗಿಲ್ಲ. ನಮ್ಮ ರಾಜ್ಯದ ಪ್ರತ್ಯೇಕ ಸಂವಿಧಾನವು ದೇಶದ ಸಂವಿಧಾನಕ್ಕೆ ಸಮವೆಂದು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ವಾದವನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಜಮ್ಮು –ಕಾಶ್ಮೀರದ ಜನತೆ ಮೊದಲು ಭಾರತ ಸಂವಿಧಾನಕ್ಕೆ ಒಳಪಡುತ್ತಾರೆ. ಆ ನಂತರ ಕಾಶ್ಮೀರದ ಪ್ರತ್ಯೇಕ ಸಂವಿಧಾನಕ್ಕೆ ಒಳಪಡುತ್ತಾರೆ ಎಂದು ನ್ಯಾ. ಕುರಿಯನ್ ಜೋಸೆಫ್ ಮತ್ತು ರೋಹಿಂಟನ್ ನಾರಿಮನ್ ಪೀಠವು ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.