
ನವದೆಹಲಿ(ಸೆ.28): ಭೀಮಾ ಕೊರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂಬಂತೆ ಸಾಮಾಜಿಕ ಹೋರಾಟಗಾರರ ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ವರ ವರ ರಾವ್ ಸೇರಿದಂತೆ ಒಟ್ಟು 5 ಸಾಮಾಜಿಕ ಹೋರಾಟಗಾರರು ಬಂಧನಕ್ಕೊಳಗಾಗಿರುವುದನ್ನು ರೋಮಿಲಾ ಥಾಪರ್ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ಬಂಧನದ ವಿಷಯವಾಗಿ ಮಧ್ಯಪ್ರವೇಶಿಸುವುದಕ್ಕೆ ನಿರಾಕರಿಸಿದೆ.
ಭಿನ್ನ ಅಭಿಪ್ರಾಯ ಹೊಂದಿರುವ ಸಾಮಾಜಿಕ ಕಾರ್ಯಕರ್ತರು ಎಂಬ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿಲ್ಲ. ಬದಲಾಗಿ ಮೇಲ್ನೋಟಕ್ಕೆ ಅವರು ನಿಷೇಧಿತ ಸಿಪಿಐ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ್ದರ ಬಗ್ಗೆ ಕೆಲವು ಸಾಕ್ಷ್ಯಗಳಿದ್ದವು ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ನ ನ್ಯಾ. ಖನ್ವಾಲಿಕರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.