
ನವದೆಹಲಿ(ಸೆ.23): ಮನುಷ್ಯರ ರಕ್ತ ಹೀರುವ ಸೊಳ್ಳೆಗಳ ನಿರ್ಮೂಲನೆ ದೇವರಿಂದ ಮಾತ್ರ ಸಾಧ್ಯವೇ ಹೊರತು ನಮ್ಮಿಂದಲ್ಲ ಎಂದು ಸುಪ್ರೀಂ ಕೋರ್ಟ್ ಅಸಹಾಯಕತೆ ವ್ಯಕ್ತಪಡಿಸಿದೆ. ಸೊಳ್ಳೆ ನಿರ್ಮೂಲನೆ ಸಂಬಂಧ ಸರ್ಕಾರಕ್ಕೆ ಸೂಚಿಸಬೇಕು ಎಂದು ಧಾನೇಶ್ ಲೆಶಧಾನ್ ಎಂಬುವವರು ಸುಪ್ರೀಂಗೆ ಮನವಿ ಮಾಡಿದ್ದರು.
ಅಂತೆಯೇ ವಿಚಾರಣೆ ಕೈಗೊಂಡ ಸುಪ್ರೀಂ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾ ಮಾಡಿ, ಇದು ದೇವರಿಂದ ಮಾತ್ರ ಸಾಧ್ಯ. ನಾವು ದೇವರಲ್ಲ. ಆದ್ದರಿಂದ ನಮ್ಮನ್ನು ಈ ಬಗ್ಗೆ ಕೇಳಬೇಡಿ ಎಂದು ತಿಳಿಸಿದೆ. ದೇಶದಲ್ಲಿ ಸೊಳ್ಳೆ ನಿರ್ಮೂಲನೆ ಸಂಬಂಧ ಸರ್ಕಾರಕ್ಕೆ ಯಾವುದೇ ಕೋರ್ಟ್ ನಿರ್ದೇಶನ ನೀಡಲು ಸಾಧ್ಯವಿಲ್ಲ. ಏಕೆಂದರೆ ನಾವು ಪ್ರತಿಯೊಬ್ಬರ ಮನೆಗೆ ಹೋಗಿ ಸೊಳ್ಳೆ ನಿರ್ಮೂಲನೆ ಮಾಡುವುದು ಅಸಾಧ್ಯ. ಅರ್ಜಿದಾರರು ಕೇಳುತ್ತಿರುವುದನ್ನು ದೇವರು ಮಾತ್ರ ಮಾಡಲು ಸಾಧ್ಯ. ಆದ್ದರಿಂದ ನಮ್ಮನ್ನು ಕೇಳಬೇಡಿ ಎಂದು ಕೋರ್ಟ್ ಅಸಹಾಯಕತೆ ವ್ಯಕ್ತಪಡಿಸಿದೆ.
ಸೊಳ್ಳೆ ನಿರ್ಮೂಲನೆ ಸಂಬಂಧ ಸರ್ಕಾರಕ್ಕೆ ಏಕೀಕೃತ ನಿರ್ದೇಶನಗಳನ್ನು ನೀಡುವಂತೆ ಅರ್ಜಿದಾರರು ಸುಪ್ರೀಂಗೆ ಮನವಿ ಮಾಡಿದ್ದರು. ಈ ಸಂಬಂಧ ಇದು ದೇವರಿಂದ ಮಾತ್ರ ಸಾಧ್ಯ ಎಂದು ನ್ಯಾಯಮೂರ್ತಿ ಮದನ್ ಬಿ ಲೋಕುರ್ ಹಾಗೂ ದೀಪಕ್ ಗುಪ್ತಾ ಅವರ ಪೀಠ ತಿಳಿಸಿದೆ. ಸೊಳ್ಳೆಯಿಂದ ಮಲೇರಿಯಾ, ಚಿಕನ್ ಗುನ್ಯಾ ಹಾಗೂ ಡೆಂಗ್ಯೂ ಸೇರಿದಂತೆ ಹಲವು ಮಹಾಮಾರಿ ರೋಗಗಳು ಬರುತ್ತಿದ್ದು, ಹಲವರು ಅದಕ್ಕೆ ಬಲಿಯಾಗುತ್ತಿದ್ದಾರೆ. ವಿಶ್ವಸಂಸ್ಥೆ ಕೂಡ ಸೊಳ್ಳೆ ನಿರ್ಮೂಲನೆಗೆ ಮುಂದಾಗಿದೆ. ಆದರೆ ಸೊಳ್ಳೆ ನಿರ್ಮೂಲನೆ ಅಸಾಧ್ಯ ಎಂದೂ ಕೂಡ ತಜ್ಞರು ಸಹ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.