
ನವದೆಹಲಿ (ಮಾ.28): ದೇಶದಲ್ಲಿ ಲೋಕಪಾಲ ನೇಮಕಕ್ಕೆ ಸಂಬಂಧಿಸಿ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇಂದು ತೀರ್ಪನ್ನು ಕಾಯ್ದಿರಿಸಿದೆ.
ನಾವು ಎಲ್ಲಾ ಕಕ್ಷಿದಾರರ ವಾದಗಳನ್ನು ಆಲಿಸಿದ್ದೇವೆ, ತೀರ್ಪನ್ನು ಕಾಯ್ದಿರಿಸಲಾಗಿದೆ ಎಂದು ನ್ಯಾ. ರಂಜನ್ ಗೊಗೊಯಿ ನೇತ್ರತ್ರದ ಪೀಠವು ಹೇಳಿದೆ.
ಲೋಕಪಾಲ ಕಾಯ್ದೆಯಲ್ಲಿ 'ವಿಪಕ್ಷ ನಾಯಕ'ನ ವ್ಯಾಖ್ಯಾನಕ್ಕೆ ತಿದ್ದುಪಡಿ ಸಂಸತ್ತಿನಲ್ಲಿ ಬಾಕಿವುಳಿದಿರುವುದರಿಂದ ಲೋಕಪಾಲ ನೇಮಕ ವಿಳಂಬವಾಗುತ್ತಿದೆ, ಎಂದು ಅಟಾರ್ನಿ ಜನರಲ್ ಮುಕುಲ್ ರೊಹ್ಟಗಿ ಹೇಳಿದ್ದಾರೆ.
ಲೋಕಪಾಲ ಕಾಯ್ದೆ-2013 ಪ್ರಕಾರ ಸಂಸತ್ತಿನಲ್ಲಿ ವಿಪಕ್ಷ ನಾಯಕ ಲೋಕಪಾಲ ನೇಮಕ ಸಮಿತಿಯ ಸದಸ್ಯರಾಗಿರುವರು. ಆದರೆ ಸಂಸತ್ತಿನಲ್ಲಿ ವಿಪಕ್ಷ ನಾಯಕರೇ ಇಲ್ಲ.
ಕಾಂಗ್ರೆಸ್ ಅತೀ ದೊಡ್ಡ ಪ್ರತಿಪಕ್ಷವಾದರೂ, ವಿಪಕ್ಷದ ಸ್ಥಾನಮಾನ ಪಡೆಯಲು ಬೇಕಾಗಿರುವಷ್ಟು ಸಂಸದರು ಅದರ ಬಳಿ ಇಲ್ಲ. ಆದುದರಿಂದ ಅತಿ ದೊಡ್ಡ ಪ್ರತಿಪಕ್ಷಕ್ಕೆ ವಿಪಕ್ಷದ ಸ್ಥಾನಮಾನ ನೀಡುವ ತಿದ್ದುಪಡಿಯಾಗಬೇಕಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.