ಶಬರಿಮಲೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ

Published : Feb 20, 2017, 04:24 PM ISTUpdated : Apr 11, 2018, 12:59 PM IST
ಶಬರಿಮಲೆ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂ

ಸಾರಾಂಶ

‘ಮಹಿಳೆಯರನ್ನು ದೇವಾಲಯದಲ್ಲಿ ಪ್ರವೇಶಿಸಲು ನಿರ್ಬಂಧಿಸಿದರೆ ಅದು ಸಂವಿಧಾನ ನೀಡಿರುವ ಸಮಾನತೆಯ ಹಕ್ಕು ಉಲ್ಲಂಘನೆ ಆಗುವುದಿಲ್ಲವೇ ಎಂಬ ಬಗ್ಗೆ ಪರಿಶೀಲಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ನವದೆಹಲಿ(ಫೆ.20): ದಕ್ಷಿಣ ಭಾರತದ ಪ್ರಖ್ಯಾತ ಶ್ರದ್ಧಾ ಕೇಂದ್ರವಾದ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೇ ಬೇಡವೇ ಎಂಬ ವಿವಾದವನ್ನು ಸಂವಿಧಾನ ಪೀಠಕ್ಕೆ ವರ್ಗಾಯಿಸಬೇಕೇ ಬೇಡವೇ ಎಂಬ ಕುರಿತ ತೀರ್ಪನ್ನು ಸರ್ವೋಚ್ಚ ನ್ಯಾಯಾಲಯ ಕಾಯ್ದಿರಿಸಿದೆ.

ನ್ಯಾ| ದೀಪಕ್ ಮಿಶ್ರಾ ಅವರ ನೇತೃತ್ವದ ತ್ರಿಸದಸ್ಯ ಪೀಠವು ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ನಡೆಸಿತು. ಈ ವೇಳೆ ಸಂವಿಧಾನ ಪೀಠದ ಮುಂದೆ ಇಡಬಹುದಾದ ಪ್ರಶ್ನೆಗಳನ್ನು ತನಗೆ ಸಲ್ಲಿಸಬೇಕು ಎಂದು ಈ ಪ್ರಕರಣದಲ್ಲಿ ಅಮಿಕಸ್ ಕ್ಯೂರೆ (ಕೋರ್ಟ್ ಸಹಾಯಕ) ಅವರಿಗೆ ಸೂಚಿಸಿ, ತೀರ್ಪು ಕಾಯ್ದಿರಿಸಿರುವುದಾಗಿ ಹೇಳಿತು.

‘ಮಹಿಳೆಯರನ್ನು ದೇವಾಲಯದಲ್ಲಿ ಪ್ರವೇಶಿಸಲು ನಿರ್ಬಂಧಿಸಿದರೆ ಅದು ಸಂವಿಧಾನ ನೀಡಿರುವ ಸಮಾನತೆಯ ಹಕ್ಕು ಉಲ್ಲಂಘನೆ ಆಗುವುದಿಲ್ಲವೇ ಎಂಬ ಬಗ್ಗೆ ಪರಿಶೀಲಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಕ್ಷರ ಲೋಕದ ಅವಧಾನಿ: ಕನ್ನಡ ಅಧ್ಯಾಪಕ ಜಿ.ಬಿ.ಹರೀಶರ ಪತ್ರಿಕಾ ಪ್ರತಿಭೆ
ನಿಮ್ಮ ಆರೋಗ್ಯಕ್ಕೆ ನಿಜವಾದದ್ದೇ ಅರ್ಹತೆ: ನಕಲಿ ಉತ್ಪನ್ನಗಳ ವಿರುದ್ಧ ಹರ್ಬಾಲೈಫ್ ಇಂಡಿಯಾದ ಉಪಕ್ರಮ