ಹೈವೇಗಳಲ್ಲಿ ಮದ್ಯದಂಗಡಿಗಳಿಗೆ ನಿಷೇಧ: ತೀರ್ಪನ್ನು ಸಡಿಲಿಸಲು ಸುಪ್ರೀಂ ನಕಾರ

Published : Mar 30, 2017, 12:28 PM ISTUpdated : Apr 11, 2018, 12:47 PM IST
ಹೈವೇಗಳಲ್ಲಿ ಮದ್ಯದಂಗಡಿಗಳಿಗೆ ನಿಷೇಧ: ತೀರ್ಪನ್ನು ಸಡಿಲಿಸಲು ಸುಪ್ರೀಂ ನಕಾರ

ಸಾರಾಂಶ

ಮದ್ಯಕ್ಕಿಂತ ಮಾನವ ಜೀವಗಳು ಮುಖ್ಯವೆಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 1ರಿಂದ ಹೆದ್ದಾರಿ ಪಕ್ಕದ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನವದೆಹಲಿ (ಮಾ.30): ರಾಷ್ಟ್ರೀಯ ಹೆದ್ದಾರಿಗಳ 500 ಮೀ. ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳಿಗೆ ನಿಷೇಧ ಹೇರಿರುವ ತನ್ನ ಹಿಂದಿನ ತೀರ್ಪನ್ನು ಸಡಿಲಿಸಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ.

ಕುಡಿದು ವಾಹನ ಚಲಾಯಿಸಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 31 ಮಾರ್ಚ್ 2017 ಬಳಿಕ ರಾಷ್ಟ್ರೀಯ ಹೆದ್ದಾರಿಯ 500 ಮೀಟರ್ ವ್ಯಾಪ್ತಿಯಲ್ಲಿರುವ ಮದ್ಯದಂಗಡಿಗಳ ಪರವಾನಿಗೆ ನವೀಕರಿಸಬಾರದೆಂದು ಕಳೆದ ಡಿ.15ರಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು.

ಬಳಿಕ, 500 ಮೀ. ವ್ಯಾಪ್ತಿಯನ್ನು ಕಡೆಮೆಗೊಳಿಸುವಂತೆ ಕೋರಿ ವಿವಿಧ ರಾಜ್ಯಗಳು ಸುಪ್ರೀಂ ಕೋರ್ಟ್'ಗೆ ಮನವಿ ಮಾಡಿದ್ದು, ಕೇಂದ್ರ ಸರ್ಕಾರವು ಕೂಡಾ ಅವುಗಳೊ0ದಿಗೆ ಸಹಮತವನ್ನು ವ್ಯಕ್ತಪಡಿಸಿತ್ತು.

ಆದರೆ, ಮದ್ಯಕ್ಕಿಂತ ಮಾನವ ಜೀವಗಳು ಮುಖ್ಯವೆಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ಏಪ್ರಿಲ್ 1ರಿಂದ ಹೆದ್ದಾರಿ ಪಕ್ಕದ ಮದ್ಯದಂಗಡಿಗಳನ್ನು ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲವರ್ ಜೊತೆ ಸೇರಿ ಪತಿ ಹತ್ಯೆಗೈದು ದೇಹದ ಒಂದೊಂದು ಪೀಸ್ ಜಿಲ್ಲೆಯ ಪ್ರತಿ ಗಾಮದಲ್ಲಿ ಎಸೆದ ಪತ್ನಿ
ಗೋವಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಕ್ಲೀನ್ ಸ್ವೀಪ್ ಗೆಲುವು, 10 ಸ್ಥಾನಕ್ಕೆ ತೃಪ್ತಿಪಟ್ಟ ಕಾಂಗ್ರೆಸ್