‘ಗಗೋಯ್ ವಿರುದ್ಧ ಷಡ್ಯಂತ್ರ ಆರೋಪ ನಿಜವಾದ್ರೆ ನ್ಯಾಯಾಂಗವೇ ಬುಡಮೇಲು’!

Published : Apr 24, 2019, 08:58 PM ISTUpdated : Apr 24, 2019, 08:59 PM IST
‘ಗಗೋಯ್ ವಿರುದ್ಧ ಷಡ್ಯಂತ್ರ ಆರೋಪ ನಿಜವಾದ್ರೆ ನ್ಯಾಯಾಂಗವೇ ಬುಡಮೇಲು’!

ಸಾರಾಂಶ

ನಿರ್ಣಾಯಕ ಹಂತ ತಲುಪಿದ ಸಿಜೆಐ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ವಿಚಾರಣೆ| ರಂಜನ್ ಗಗೋಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣ| ಗಗೋಯ್ ವಿರುದ್ಧ ಷಡ್ಯಂತ್ರ ಎಂದ ವಕೀಲ ಉತ್ಸವ್ ಬೈನ್ಸ್| ‘ಷಡ್ಯಂತ್ರ ನಿಜವಾದರೆ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲು’| ಗಂಭೀರ ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್| ಷಡ್ಯಂತ್ರದ ಸಾಕ್ಷ್ಯಾಧಾರಗಳಿವೆ ಎಂದ ಉತ್ಸವ್ ಬೈನ್ಸ್|

ನವದೆಹಲಿ(ಏ.24): ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ವಿಚಾರಣೆ ನಿರ್ಣಾಯಕ ಹಂತ ತಲುಪಿದೆ.

ಈ ಮಧ್ಯೆ ಸಿಜೆಐ ವಿರುದ್ಧದ ಷಡ್ಯಂತ್ರ ಆರೋಪ ನಿಜವೇ ಆದರೆ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ರಂಜನ್ ಗಗೋಯ್ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಉತ್ಸವ್ ಬೈನ್ಸ್, ಗಗೋಯ್ ವಿರುದ್ಧದ ಷಡ್ಯಂತ್ರ ನಡೆಸಿರುವ ಕುರಿತು ತಮ್ಮ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿದ್ದಾರೆ. 

ಉತ್ಸವ್ ಬೈನ್ಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ತ್ರಿಸದಸ್ಯ ಪೀಠ, ಒಂದು ವೇಳೆ ರಂಜನ್ ಗಗೋಯ್ ವಿರುದ್ಧ ಷಡ್ಯಂತ್ರ ನಡೆದಿರುವುದು ನಿಜವಾದರೆ ಭಾರತದ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು, ಏ.23 ರಂದು ಎರಡನೇ ಹಂತದ ಮತದಾನ ಮುಕ್ತಾಯ ಕಂಡಿದೆ. ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದ 2ನೇ ರಾಜಧಾನಿ ಬೆಳಗಾವಿಗೆ ಉತ್ತಮ ಭವಿಷ್ಯ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಲೋಕಸಭೆಯಲ್ಲಿ 2 ರೈತಪರ ಮಸೂದೆ ಮಂಡನೆ: ಸಂಸದ ಡಾ.ಕೆ.ಸುಧಾಕರ್