
ನವದೆಹಲಿ (ಮಾ.20): ಟ್ರಿಪಲ್ ತಲಾಖ್ ವಿಚಾರ ದಿನದಿಂದ ದಿನಕ್ಕೆ ತ್ವರಿತಗತಿ ಪಡೆದುಕೊಳ್ಳುತ್ತಿದ್ದು ಮಹಿಳೆಯರ ಶ್ರೇಯೋಭಿವೃದ್ಧಿಗಾಗಿ ಸುಪ್ರೀಂಕೋರ್ಟ್ ನಿಂದ ಸಕಾರಾತ್ಮಕ ತೀರ್ಪು ಹೊರಬರಬೇಕು. ಅದಕ್ಕಾಗಿ ಕಾಯುತ್ತಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ.
ನಮ್ಮ ದೇಶದಲ್ಲಿ ತ್ರಿವಳಿ ತಲಾಖ್ ವಿಚಾರವಾಗಿ ಸಮಸ್ಯೆಗಳನ್ನು ಎದುರಿಸುತ್ತಿರುವ 10 ಲಕ್ಷ ಮಹಿಳೆಯರ ಬಗ್ಗೆ ನನಗೆ ಕಳಕಳಿಯಿದೆ. ನಾನು ಇದನ್ನು ವಿರೋಧಿಸುತ್ತೇನೆ. ಸುಪ್ರೀಂಕೋರ್ಟ್ ನಿಂದ ಸಕಾರಾತ್ಮಕ ತೀರ್ಪು ಹೊರ ಬರುತ್ತದೆ ಎಂಬ ವಿಶ್ವಾಸವಿದೆ. ಅಂದಹಾಗೆ ತ್ರಿವಳಿ ತಲಾಖ್ ಎನ್ನುವ ಪದವನ್ನು ಸುಪ್ರೀಂಕೋರ್ಟ್ ನಿಷೇಧಿಸಬೇಕು ಎಂದು ಅಯ್ಯರ್ ಹೇಳಿದ್ದಾರೆ.
ವಿವಾದಾತ್ಮಕ ವಿಚ್ಚೇದನ ಪದ್ಧಿತಿಯಾದ ತ್ರಿವಳಿ ತಲಾಖ್ ಗೆ ಪೂರ್ಣವಿರಾಮ ಇಡಬೇಕೆಂಬ ಅರ್ಜಿಗೆ ದೇಶಾದ್ಯಂತ ಮಿಲಿಯನ್ ಗಿಂತಲೂ ಹೆಚ್ಚು ಮಹಿಳೆಯರು ಕಳೆದ ವಾರ ಸಹಿ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.