ರಾಜ್ಯವಾರು ಎಸ್​ಸಿ/ಎಸ್​ಟಿ ಮೀಸಲಾತಿ: ಸುಪ್ರೀಂ ಹೇಳಿದ್ದಿಷ್ಟು!

Published : Aug 30, 2018, 05:49 PM ISTUpdated : Sep 09, 2018, 09:54 PM IST
ರಾಜ್ಯವಾರು ಎಸ್​ಸಿ/ಎಸ್​ಟಿ ಮೀಸಲಾತಿ: ಸುಪ್ರೀಂ ಹೇಳಿದ್ದಿಷ್ಟು!

ಸಾರಾಂಶ

ಎಸ್​ಸಿ/ಎಸ್​ಟಿ ಮೀಸಲಾತಿ ಕುರಿತು ಸುಪ್ರೀಂ ಮಹತ್ವದ ತೀರ್ಪು! ಒಂದು ರಾಜ್ಯದ ಎಸ್​ಸಿ/ಎಸ್​ಟಿ ಸದಸ್ಯರು ಬೇರೊಂದು ರಾಜ್ಯದಲ್ಲಿ ಮೀಸಲಾತಿಗೆ ಅರ್ಹರಲ್ಲ! ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಸಾಧ್ಯವಿಲ್ಲ ಎಂದ ಸುಪ್ರೀಂ    

ನವದೆಹಲಿ(ಆ.30): ಒಂದು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ(ಎಸ್​ಸಿ/ಎಸ್​ಟಿ)ದ ಸದಸ್ಯರು ಮತ್ತೊಂದು ರಾಜ್ಯದಲ್ಲಿ ಮೀಸಲಾತಿ ಸೌಲಭ್ಯ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮತ್ತೊಂದು ರಾಜ್ಯಕ್ಕೆ ವಲಸೆಹೋದ ಎಸ್​ಸಿ/ಎಸ್​ಟಿ ಸದಸ್ಯರು ಆ ರಾಜ್ಯದಲ್ಲಿ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹರಲ್ಲ ಎಂದು ನ್ಯಾಯಮೂರ್ತಿ ರಂಜನ್ ಗೋಗೊಯಿ ನೇತೃತ್ವದ ಸಂವಿಧಾನಿಕ ಪೀಠ ಸ್ಪಷ್ಟಪಡಿಸಿದೆ.

ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ ಎಂದು ಸೂಚಿಸಿದ ವ್ಯಕ್ತಿ ಮತ್ತೊಂದು ರಾಜ್ಯದಲ್ಲಿಯೂ ತಾನು ಪರಿಶಿಷ್ಟ ಜಾತಿಯ ವ್ಯಕ್ತಿ ಎಂಬ ಆಧಾರದ ಮೇಲೆ ಮೀಸಲಾತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಇತರೆ ರಾಜ್ಯಗಳ ಎಸ್​ಸಿ/ಎಸ್​ಟಿ ಸದಸ್ಯರು ದೆಹಲಿಯ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಸೌಲಭ್ಯ ಪಡೆಯುವ ಕುರಿತು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ಈ ಮಹತ್ವದ ತೀರ್ಪು ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಪ್ಪಳದಲ್ಲಿ ಭೀಕರ ಅಪಘಾತ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ವನ್ಯಜೀವಿ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಕ್ರಮ: ಸಚಿವ ಈಶ್ವರ್‌ ಖಂಡ್ರೆ