
ನವದೆಹಲಿ: ಬರಪೀಡಿತ ಪ್ರದೇಶದ ರೈತರ ಕೃಷಿ ಸಾಲಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನೀಡಿದ ದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ.
ದೆಹಲಿಯ ಜಂತರ್ ಮಂತರ್’ನಲ್ಲಿ ತಮಿಳುನಾಡು ರೈತರು 23 ದಿನ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕೃಷಿ ಸಾಲ ಮನ್ನಾ ಮಾಡುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಆದೇಶಿಸಿತ್ತು.
ರೈತರ ಸಾಲ ಮನ್ನಾ ಮಾಡಲು ಹಾಗೂ ಅವರಿಂದ ಬಾಕಿ ವಸೂಲು ಮಾಡದಿರಲು ಸಹಕಾರಿ ಸಂಘಗಳಿಗೆ ಮಧುರೈ ಪೀಠದ ಆದೇಶಿಸಿದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಕೇಂದ್ರ ಸರ್ಕಾರವೂ ಕೂಡಾ ಮಧ್ಯ ಪ್ರವೇಶಿಸಬೇಕು, ಹಾಗೂ ತಮಿಳುನಾಡು ಸರ್ಕಾರಕ್ಕೆ ಸಹಾಯಹಸ್ತ ಚಾಚಬೇಕು ಎಂದು ಹೈಕೋರ್ಟ್ ಹೇಳಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.