
ನವದೆಹಲಿ (ಸೆ.11): ಕೇಂದ್ರ ಮತ್ತು ರಾಜ್ಯದಲ್ಲಿ ಲೋಕಪಾಲ್ ಹಾಗೂ ಲೋಕಾಯುಕ್ತ ನೇಮಕಾತಿ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.14 ರಂದು ನಡೆಸಲಿದೆ.
ಲೋಕಾಯುಕ್ತ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಮೂಲಭೂತ ಸೌಕರ್ಯ ಮತ್ತು ಬಜೆಟ್ ನಲ್ಲಿ ಹಣವನ್ನು ಮೀಸಲಿಡಬೇಕೆಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೋಗಾಯ್ ಮತ್ತು ಪಿ ಸಿ ಪಾಂಟ್ ರವರ ದ್ವಿಸದಸ್ಯ ಪೀಠವನ್ನು ನ್ಯಾಯಾಲಯ ನೇಮಿಸಿದೆ.
ದೆಹಲಿ ಬಿಜೆಪಿ ವಕ್ತಾರ ಹಾಗೂ ನ್ಯಾಯವಾದಿ ಅಶ್ವಿನಿ ಕುಮಾರ್ ಉಪಾಧ್ಯಾಯ್ ಲೋಕಪಾಲ್, ಲೋಕಾಯುಕ್ತವನ್ನು ನೇಮಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.