
ನವದೆಹಲಿ (ಸೆ.24): ಸುಪ್ರೀಂಕೋರ್ಟ್ ಭಾರತದ ಸರ್ವೋಚ್ಚ ನ್ಯಾಯಾಲಯವಾಗಿದ್ದು ಇದು ನೀಡುವ ತೀರ್ಪಿಗೆ ಎಲ್ಲರೂ ತಲೆಬಾಗಬೇಕು ಎಂದು ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ತ್ರಿನವುಕರಸರ್ ಇಂದು ಹೇಳಿದ್ದಾರೆ.
ಉಭಯ ರಾಜ್ಯಗಳ ಕಾವೇರಿ ವಿಚಾರದ ಮೇಲುಸ್ತುವಾರಿ ನೋಡಿಕೊಳ್ಳಲು ಪ್ರಾಧಿಕಾರ ರಚನೆ ಮಾಡಲು ಸುಪ್ರೀಂ ಸೂಚಿಸಿದೆ. ಈ ಸೂಚನೆಯನ್ನು ಪಾಲಿಸಬೇಕು ಎಂದಿದ್ದಾರೆ.
ಪಕ್ಷ ಯಾವುದೇ ಇರಲಿ, ರಾಜ್ಯ ಯಾವುದೇ ಇರಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರಾಜ್ಯಕ್ಕೆ ಯಾವುದೇ ಸಮಸ್ಯೆಯಿರಬಹುದು ಸುಪ್ರೀಂ ತೀರ್ಮಾನವನ್ನು ಪಾಲಿಸದೇ ಬೇರೆ ದಾರಿಯಿಲ್ಲ ಎಂದು ತ್ರಿನವುಕರಸರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.