
ನವದೆಹಲಿ (ಜು.14): ಲಂಡನ್’ನಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್ ಮಲ್ಯರವರನ್ನು ಕೇಂದ್ರ ಸರ್ಕಾರ ಕೋರ್ಟ್’ನಲ್ಲಿ ಹಾಜರುಪಡಿಸುವವರೆಗೆ ಅವರ ಜೈಲುಶಿಕ್ಷೆಯನ್ನು ನಿರ್ಧರಿಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ.
ಕೇಂದ್ರ ಸರ್ಕಾರವು ಉದ್ಯಮಿ ವಿಜಯ್ ಮಲ್ಯರವರನ್ನು ನ್ಯಾಯಾಂಗದಲ್ಲಿ ಹಾಜರುಪಡಿಸಲು ವಿಫಲವಾದ ಹಿನ್ನಲೆಯಲ್ಲಿ ಮಲ್ಯರವರ ಮೇಲಿರುವ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಂದೂಡಲಾಗಿದೆ. ಅವರನ್ನು ನ್ಯಾಯಾಂಗಕ್ಕೆ ಹಾಜರುಪಡಿಸಿದ ಬಳಿಕವೇ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.