ಎತ್ತಿನ ಹೊಳೆ ಯೋಜನೆಯಲ್ಲಿ ಬಹುದೊಡ್ಡ ಹಗರಣ: ರಾಜ್ಯದ 3 ಸಚಿವರು ಹಗರಣದಲ್ಲಿ ಭಾಗಿಯಾಗಿರುವ ಶಂಕೆ

Published : Nov 29, 2016, 07:41 AM ISTUpdated : Apr 11, 2018, 12:55 PM IST
ಎತ್ತಿನ ಹೊಳೆ ಯೋಜನೆಯಲ್ಲಿ ಬಹುದೊಡ್ಡ ಹಗರಣ: ರಾಜ್ಯದ 3 ಸಚಿವರು ಹಗರಣದಲ್ಲಿ ಭಾಗಿಯಾಗಿರುವ ಶಂಕೆ

ಸಾರಾಂಶ

3 ಸಚಿವರಿಗೆ 50 ಕೋಟಿ ರೂಪಾಯಿಯನ್ನು ಲಂಚ ನೀಡಲಾಗಿದೆ ಎಂಬ ಆರೋಪದ ಮೇರೆಗೆ, 16 ಕಡೆ ಗುತ್ತಿಗೆ ಕಚೇರಿಗಳಿಗೆ ಐಟಿ ದಾಳಿ ನಡೆದಿದೆ. ಇದೇ ವಿಚಾರವಾಗಿ ಜನಾರ್ದನ ಪೂಜಾರಿ ಆರೋಪಿ ಸಚಿವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೆ ಹೈಕಮಾಂಡ್ ಕೂಡಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಿಎಂಗೆ ನಿರ್ದೇಶನ ನೀಡಬೇಕು ಎಂದಿದ್ದಾರೆ.

ಮಂಗಳೂರು(ನ.29): ಎತ್ತಿನಹೊಳೆ ಯೋಜನೆಯಲ್ಲಿ ದೊಡ್ಡ ಹಗರಣ ನಡೆದಿದ್ದು, ಆಂಧ್ರ ಮೂಲದ ಕಳಂಕಿತ ಸಂಸ್ಥೆಗೆ ಟೆಂಡರ್ ನೀಡಲಾಗಿದೆ. ಇದರಲ್ಲಿ ರಾಜ್ಯದ 3 ಸಚಿವರು ಈ ಹಗರಣದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ವಿಚಾರವಾಗಿ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಗಂಭೀರ ಆರೋಪ ಮಾಡಿದ್ದಾರೆ.

3 ಸಚಿವರಿಗೆ 50 ಕೋಟಿ ರೂಪಾಯಿಯನ್ನು ಲಂಚ ನೀಡಲಾಗಿದೆ ಎಂಬ ಆರೋಪದ ಮೇರೆಗೆ, 16 ಕಡೆ ಗುತ್ತಿಗೆ ಕಚೇರಿಗಳಿಗೆ ಐಟಿ ದಾಳಿ ನಡೆದಿದೆ. ಇದೇ ವಿಚಾರವಾಗಿ ಜನಾರ್ದನ ಪೂಜಾರಿ ಆರೋಪಿ ಸಚಿವರನ್ನು ಸಂಪುಟದಿಂದ ಕಿತ್ತು ಹಾಕಿ ಎಂದು ಸಿಎಂಗೆ ಮನವಿ ಮಾಡಿದ್ದಾರೆ. ಅಲ್ಲದೆ ಹೈಕಮಾಂಡ್ ಕೂಡಾ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸಿಎಂಗೆ ನಿರ್ದೇಶನ ನೀಡಬೇಕು ಎಂದಿದ್ದಾರೆ.

ಈ ಹಗರಣದ ಕುರಿತಾಗಿ ಮತ್ತಷ್ಟು ಮಾತನಾಡಿದ ಜನಾರ್ಧನ ಪೂಜಾರಿ ವಿಚಾರಣೆ ನಡೆಸಿ ರಾಜ್ಯದ ಜನರಿಗೆ ಸತ್ಯಾಂಶ ತಿಳಿಸಿ ಇಲ್ಲದಿದ್ದರೆ ಈ ಆರೋಪದಲ್ಲಿ ನೀವೂ ಭಾಗಿ ಎಂದು ಜನ ತಿಳಿದುಕೊಳ್ಳುತ್ತಾರೆ. ಸಿಎಂ ಪಕ್ಷದ ಮರ್ಯಾದೆಯನ್ನು ರಕ್ಷಣೆ ಮಾಡಬೇಕು. ಇಲ್ಲದಿದ್ದರೆ ಜನ ನಿಮ್ಮನ್ನು ಕ್ಷಮಿಸಲಾರರು ಎಂದು ಸಿಎಂಗೆ ಸಲಹೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು