
ನವದೆಹಲಿ (ಫೆ.03): ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಬಳಿಕ ಕಪ್ಪುಹಣ ಸಂಗ್ರಹಕ್ಕೆ ಕಡಿವಾಣ ಬೀಳಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜಿಎಸ್ ಟಿ ಕರಡು ಮಸೂದೆಯನ್ನು ಈ ಬಾರಿ ಬಜೆಟ್ ನಲ್ಲಿ ಪರಿಚಯಿಸಲಾಗಿದೆ. ಅವುಗಳನ್ನು ಅಂತಿಮಗೊಳಿಸಿ ಸಂಸತ್ತಿನ ಎರಡನೇ ಅಧಿವೇಶನದಲ್ಲಿ ತರುವುದು ನನ್ನ ಉದ್ದೇಶ. ಜಿಎಸ್ ಟಿ ಜಾರಿಯಾಗುವುದರಿಂದ ಕಪ್ಪುಹಣ ಸಂಗ್ರಹಕ್ಕೆ ಕಡಿವಾಣ ಬೀಳಲಿದೆ ಎಂದು ಅರುಣ್ ಜೇಟ್ಲಿ ಆಶಯ ವ್ಯಕ್ತಪಡಿಸಿದರು.
ಈ ಬಾರಿಯ ಬಜೆಟ್ ದೇಶದ ಆರ್ಥಿಕತೆಯಲ್ಲಿ ಸುಧಾರಣೆ ತರಲಿದೆ ಜೊತೆಗೆ ಕೆಲವು ಪ್ರಮುಖ ಬದಲಾವಣೆ ತರಲಿದೆ ಎಂದಿದ್ದಾರೆ.
ರೈಲ್ವೇ ಹಾಗೂ ಕೇಂದ್ರ ಬಜೆಟನ್ನು ವಿಲೀನಗೊಳಿಸಿರುವುದು ಒಂದು ಸದುದ್ದೇಶಕ್ಕಾಗಿ. ಕೇಂದ್ರ ಬಜೆಟ್ ಗೆ ಹೋಲಿಸಿದರೆ ರೈಲ್ವೇ ಬಜೆಟ್ ಪ್ರಮಾಣ ದೊಡ್ಡದು. ರೈಲ್ವೇ ಅಭಿವೃದ್ಧಿ ದೇಶದ ಆರ್ಥಿಕ ಪ್ರಗತಿಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.