ಅಶ್ರಫ್ ಹತ್ಯೆ ಪ್ರಕರಣ: ಐವರ ಬಂಧನ

Published : Jun 24, 2017, 10:37 AM ISTUpdated : Apr 11, 2018, 12:34 PM IST
ಅಶ್ರಫ್ ಹತ್ಯೆ ಪ್ರಕರಣ: ಐವರ ಬಂಧನ

ಸಾರಾಂಶ

ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಶ್ರಫ್​ ಕಲಾಯಿ ಹತ್ಯೆ ಮಾಡಿದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ.

ಮಂಗಳೂರು(ಜೂ.24): ದಕ್ಷಿಣ ಕನ್ನಡ ಜಿಲ್ಲೆ ಬಂಟವಾಳದ  ಎಸ್'ಡಿಪಿಐ  ಮುಖಂಡ ಅಶ್ರಫ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಶ್ರಫ್​ ಕಲಾಯಿ ಹತ್ಯೆ ಮಾಡಿದ ಐವರು ಆರೋಪಿಗಳನ್ನ ಬಂಧಿಸಿದ್ದಾರೆ. ಹಂತಕರ ಪತ್ತೆಗೆ 5 ಪ್ರತ್ಯೇಕ ತಂಡಗಳು ಕಾರ್ಯಾಚರಣೆ ನಡೆಸಿ ಕೊನೆಗೂ ಆರೋಪಿಗಳನ್ನು ಬಂಧಿಸಿದ್ದಾರೆ.

ರಂಜಿತ್​, ಪವನ್​, ಸಂತೋಷ್​, ಅಭಿ, ಶಿವಪ್ರಸಾದ್​ ಬಂಧಿತರು.

ಜೂನ್​ 21ರಂದು 3 ಬೈಕ್​'ನಲ್ಲಿ  ಬಂದ 6 ಆರೋಪಿಗಳು  ಅಶ್ರಫ್ ಹತ್ಯೆ ನಡೆಸಿದ್ದರು.  ಈ ಪ್ರಕರಣ ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಅಶ್ರಫ್ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬಂಟ್ವಾಳ ತಾಲೂಕಿನಾದ್ಯಂತ ವ್ಯಾಪಕ ಪ್ರತಿಭಟನೆ ನಡೆದಿತ್ತು. ಉದ್ವಿಘ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ. 27ರವರೆಗೂ ಸೆ.144 ಜಾರಿ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ- ಅಮೆರಿಕ ವ್ಯಾಪಾರ ಒಪ್ಪಂದ ಬಹುತೇಕ ಫೈನಲ್‌- ಬಾಕಿ ಉಳಿದ ವಿಷಯ ಇತ್ಯರ್ಥಕ್ಕೆ ಚರ್ಚೆ
Bhatkal: ಮರ ಏರಿ ಹರಕೆ ತೀರಿಸುವ ವಿಶಿಷ್ಟ ಆಚರಣೆಗೆ ಸಾಕ್ಷಿಯಾದ ಶೇಡಬರಿ ಜಾತ್ರೆ