
ನವದೆಹಲಿ (ಮೇ.10): ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ವಿಜಯ್ ಮಲ್ಯರವರ ವಿಚಾರಣೆ ಜುಲೈ 10 ರಂದು ನಡೆಯಲಿದ್ದು, ಅವರು ಹಾಜರಾಗುವುದನ್ನು ಖಾತ್ರಿಪಡಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಗೃಹಸಚಿವಾಲಯಕ್ಕೆ ಸೂಚಿಸಿದೆ.
ವಿಜಯ್ ಮಲ್ಯ ತಮ್ಮ ಸಂಪೂರ್ಣ ಆಸ್ತಿಯ ವಿವರವನ್ನು ಬಹಿರಂಗಪಡಿಸದೇ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ. ಬ್ರಿಟಿಷ್ ಕಂಪನಿ ಡಿಯಾಗೋಯಿಂದ ಪಡೆದ 40 ಮಿಲಿಯನ್ ಹಣವನ್ನು ತಮ್ಮ ಮೂವರು ಮಕ್ಕಳ ಖಾತೆಗೆ ಟ್ರಾನ್ಸ್ ಫರ್ ಮಾಡುವ ಮೂಲಕ ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಜುಲೈ 10 ರಂದು ನಡೆಯುವ ವಿಚಾರಣೆಯಲ್ಲಿ ಮಲ್ಯರವರ ಹಾಜರಾತಿಯನ್ನು ಖಾತ್ರಿಪಡಿಸುವಂತೆ ಗೃಹ ಲಾಖೆಗೆ ನಾವು ಸೂಚಿಸಿದ್ದೇವೆ. ತೀರ್ಪಿನ ನಕಲು ಪ್ರತಿಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ನ್ಯಾ. ಆದರ್ಶ್ ಕುಮಾರ್ ಹಾಗೂ ಉದಯ್ ಲಲಿತ್ ಪೀಠ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.