
ಲಖನೌ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮದೇ ಮೇಣದ ಪ್ರತಿಮೆ ಮೇಲೆ ‘ಚೋರ್’ ಎಂದು ಬರೆಯುತ್ತಿರುವಂತೆ ತೋರಿಸಲಾದ ತಿರುಚಿದ ಚಿತ್ರ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ದಿವ್ಯಾ ಸ್ಪಂದನಾ(ರಮ್ಯಾ) ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಾಗಿದೆ.
ಈ ಬಗ್ಗೆ ಬುಧವಾರ ಪ್ರಕರಣ ದಾಖಲಿಸಿದ ಬಳಿಕ ಮಾತನಾಡಿದ ವಕೀಲ ಸೈಯ್ಯದ್ ರಿಜ್ವಾನ್ ಅಹಮದ್, ‘ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೋಲುವ ಚಿತ್ರದ ಹಣೆ ಮೇಲೆ ಮೋದಿ ಅವರೇ ಹೋಲುವ ಮತ್ತೊಬ್ಬರು ಚೋರ್(ಕಳ್ಳ) ಎಂದು ಬರೆದಿರುವ ಚಿತ್ರವನ್ನು ದಿವ್ಯಾ ಸ್ಪಂದನಾ ಟ್ವೀಟ್ ಮಾಡಿದ್ದಾರೆ.
ಈ ಮೂಲಕ ಪ್ರಧಾನಿ ಘನತೆಗೆ ಚ್ಯುತಿ ತಂದಿದ್ದಾರೆ,’ ಎಂದು ದೂರಿದ್ದಾರೆ. ಇಂಥ ಕೃತ್ಯದ ಮೂಲಕ ಪ್ರಜಾಪ್ರಭುತ್ವದ ಆಡಳಿತ ವ್ಯವಸ್ಥೆಯಿಂದ ಆಯ್ಕೆಯಾದ ಪ್ರಧಾನಿಯನ್ನು ಅಪಮಾನಿಸಲಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.